Midday Meal Scheme: ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಬಿಸಿಯೂಟ ಯೋಜನೆಗೆ ಚಾಲನೆ

Kadaba Times News

 

 ಶ್ರೀಮತಿ ಜೇಸಿಂತಾ ವೇಗಸ್ ಮತ್ತು ಶ್ರೀ ಗಿರಿಧರ್ ರೈ  ಉದ್ಘಾಟಿಸುತ್ತಿರುವುದು

ಕಡಬ :  ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ   ಮಧ್ಯಾಹ್ನ ಬಿಸಿಯೂಟ ಯೋಜನೆ ಇಂದಿನಿಂದ ಪ್ರಾರಂಭಗೊಂಡಿದೆ.


ಸಂಸ್ಥೆಯ ಈ ಮಹತ್ವಕಾಂಕ್ಷಿ ಯೋಜನೆಯ ಉದ್ಘಾಟನೆಯನ್ನು ಸೈಂಉದ್ಟ್ಗ್ ಜೋಕಿಮ್ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ    ಶ್ರೀಮತಿ ಜೇಸಿಂತಾ ವೇಗಸ್ ಮತ್ತು ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷ ಶ್ರೀ ಗಿರಿಧರ್ ರೈ ನೆರವೇರಿಸಿದರು.


ಸಂಸ್ಥೆಯ ಸಂಚಾಲಕ  ವಂದನೀಯ ಪ್ರಕಾಶ್ ಪೌಲ್ ಡಿಸೋಜಾ ದೇವರ ಆಶೀರ್ವಚನವನ್ನು ನೆರವೇರಿಸಿ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಪೋಷಕಾಂಶ ಭರಿತ ಆಹಾರವನ್ನು ಒದಗಿಸುವ ದೃಷ್ಟಿಯಿಂದ ಈ ಯೋಜನೆ ರೂಪಿಸಲಾಗಿದೆ ಎಂದರು.


ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು, ಶಿಕ್ಷಕ - ಶಿಕ್ಷಕೇತರ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.   ಸಂಸ್ಥೆಯ ಪ್ರಾಂಶುಪಾಲರಾದ  ವಂದನೀಯ ಅಮಿತ್ ಪ್ರಕಾಶ್ ರೋಡ್ರಿಗಸ್ ಸ್ವಾಗತಿಸಿ ನಿರೂಪಿಸಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ದಕ್ಷ ವಂದಿಸಿದರು.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top