ನೆಲ್ಯಾಡಿ:ಹಬ್ಬದ ಸಂಭ್ರಮದಲ್ಲಿರುವಾಗಲೇ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ

Kadaba Times News
ನೆಲ್ಯಾಡಿ : ಕ್ಯಾನ್ಸರ್ ಪೀಡಿತ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಕೊಣಾಲು ಗ್ರಾಮದಿಂದ ವರದಿಯಾಗಿದೆ


ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ  ಚಾಮೇತಮೂಲೆ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದ್ದು  ಅಂಬೇಡ್ಕರ್ ಎಂಬವರ ಪತ್ನಿ ಸೀತಾ (47) ಆತ್ಮಹತ್ಯೆ ಮಾಡಿಕೊಂಡವರು.

 
ಕ್ಯಾನ್ಸರ್ ಪೀಡಿತೆಯಾಗಿದ್ದ ಇವರು ನಿರಂತರ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ಇದ್ದ ಬಗ್ಗೆ ಮನ ನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೈದಿರುತ್ತಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top