



ಕಡಬ: ಶಾಮಿಯಾನದ ಕೆಲಸಕ್ಕೆಂದು ಹೋದ ಯುವಕನೋರ್ವ ಮನೆಗೆ ಬಾರದೆ ಕಾಣೆಯಾಗಿದ್ದು ಕಡಬ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಬಿಳಿನೆಲೆ ಗ್ರಾಮದ ಮುಂಗ್ಲಿ ನಿವಾಸಿ ಶಾಂತಪ್ಪ ಎಂಬವರ ಮಗ ಸಂದೀಪ್ ( ವ 30) ಕಾಣೆಯಾದ ಯುವಕ.
ಮರ್ದಾಳದಲ್ಲಿ ವಿನಯ ಎಂಬವರಿಗೆ ಸೇರಿದ ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಈತ ನ.27 ರಂದು ಕೆಲಸಕ್ಕೆ ಬಂದು ಸಾಯಂಕಾಲ ನೆಟ್ಟಣದ ಪ್ರತೀಕ್ ಎಂಬಾತನ ಜೊತೆ ಕಾರಲ್ಲಿ ಹೋಗಿರುವುದಾಗಿ ಶಾಮಿಯಾನ ಮಾಲಕರರು ಮನೆಯವರಿಗೆ ತಿಳಿಸಿದ್ದಾರೆ.
ಕಾಣೆಯಾದ ತನ್ನ ಮಗನನ್ನು ಹುಡುಕಿಕೊಡುವಂತೆ ತಾಯಿ ಸರೋಜ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.