ಜುಮಾದಿ ಬಂಟ ದೈವ ಮತ್ತು ಮಂಗಳ ಮುಖಿಯ ನಡುವಿನ ಕಥಾನಕ: ಮೂರು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಈ ಸಿನೆಮಾ

ಜುಮಾದಿ ಬಂಟ ದೈವ ಮತ್ತು ಮಂಗಳ ಮುಖಿಯ ನಡುವಿನ ಕಥಾನಕ: ಮೂರು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಈ ಸಿನೆಮಾ

Kadaba Times News

 

ದಿಗಿಲ್ ಚಿತ್ರದ ಪೋಸ್ಟರ್

ದಕ್ಷಿಣ ಕನ್ನಡ: ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್ಮುಂಡಾಡಿ  ಅವರು ದಿಗಿಲ್ ಹೆಸರಿನ ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ.  ತುಳುನಾಡಿನಲ್ಲಿ ಆರಾಧಿಸುವ ಜುಮಾದಿ ಬಂಟ ದೈವದ ಕಥೆಯನ್ನು ತೆರೆಯ ಮೇಲೆ ತರುತ್ತಿದ್ದಾರೆ. ಜುಮಾದಿ ಬಂಟ ದೈವ ಮತ್ತು ಮಂಗಳ ಮುಖಿಯ ನಡುವಿನ ಕಥಾನಕವನ್ನು ಹೇಳಲು ಹೊರಟಿದ್ದಾರೆ.


ಬಗ್ಗೆ ಮಾತನಾಡಿರುವ ಅವರು  “ʼದಿಗಿಲ್‌ʼ ಹೊಸತನದ ಕಥೆ. ಸತ್ಯ ಘಟನೆಯೊಂದರ ಕಥೆಯನ್ನು ಇಲ್ಲಿ ಹೇಳಲು ಹೊರಟಿದ್ದೇವೆ. ಇದು ಮಣ್ಣಿನ ಕಥೆ. ಆದರೆ ಹಿಂದೆಂದೂ ಕೇಳಿರದ ಕಥೆ ಇಲ್ಲಿದೆಎನ್ನುತ್ತಾರೆ.


ʼದಿಗಿಲ್‌ʼ ಎಂದರೆ ಭಯ ಎಂದರ್ಥ. ಚಿತ್ರವು ತುಳು, ಕನ್ನಡ ಮತ್ತು ಮಲಯಾಳಂ ಹೀಗೆ ಮೂರು ಭಾಷೆಯಲ್ಲಿ ಬರುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಳಂಜ, ಪುಂಜಾಲಕಟ್ಟೆ, ಮಡಂತ್ಯಾರು ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ.  ಸದ್ಯ ಶೂಟಿಂಗ್ಮುಗಿಸಿರುವ  ದಿಗಿಲ್ಚಿತ್ರತಂಡ ಡಬ್ಬಿಂಗ್ನಲ್ಲಿ ನಿರತವಾಗಿದೆ. ಜನವರಿ ವೇಳೆಗೆ ಬಿಡುಗಡೆ ಮಾಡುವ ಯೋಜನೆಯಲ್ಲಿದೆ .



ರಾಮ್ಮೂವೀಸ್ಮತ್ತು ಎಂ.ಆರ್.ಪಿ ಎಂಟರ್ಟೈನ್ಮೆಂಟ್ಬ್ಯಾನರ್ನಲ್ಲಿ ಮೈಸೂರು ರಮೇಶ್ಮತ್ತು ರವಿಶಂಕರ್ಪೈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚೇತನ್ರೈ ಮಾಣಿ, ಶೋಭಾ ಶೆಟ್ಟಿ, ಅಗ್ನಿಸಾಕ್ಷಿ ಖ್ಯಾತಿ ಅಮಿತ್ರಾವ್‌, ರಮೇಶ್ರೈ ಕುಕ್ಕುವಳ್ಳಿ, ಪುಷ್ಪರಾಜ್  ಬೊಳ್ಳಾರ್, ರೂಪ ಡಿ ಶೆಟ್ಟಿ, ಸರೋಜಿನಿ ಶೆಟ್ಟಿ, ಬಾಬಾ ಪ್ರಸಾದ್ ಅರಸ ಕುತ್ಯಾರ್, ನಾಗರಾಜ್ ರಾವ್ ವರ್ಕಾಡಿ, ಎಮ್ ಕೆ ಮಠ, ನಾರಾಯಣ ಶಾಬಾರಾಯ, ಅನಿಷ್ ಪೂಜಾರಿ ವೇಣೂರು, ಎಚ್ ಕೆ ನಯನಾಡು, ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.



ಚಿತ್ರಕ್ಕೆ ಆಕ್ಷನ್ಕಟ್ಹೇಳಿರುವ ಚೇತನ್ಮುಂಡಾಡಿ ಅವರೊಂದಿಗೆ ಎಚ್ಕೆ ನೈನಾಡ್ಅವರು ಸಂಭಾಷಣೆ ಬರೆದಿದ್ದಾರೆ. ಮಣಿಕಾಂತ್ಕದ್ರಿ ಸಂಗೀತವಿದ್ದು, ಪದ್ಮನಾಭನ್ಮಣಿ ಕ್ಯಾಮರಾ ಕೈಚಳಕವಿದ್ದು, ಕೀರ್ತರಾಜ್ ಡಿ ಸಂಕಲನವಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top