


ಕಡಬ ಟೈಮ್ಸ್ ,ಬೆಳ್ತಂಗಡಿ: ಕಾರ್ಯಕ್ರಮಕ್ಕೆಂದು ಬಂದ ಯುವಕರು ಊಟದ ಬಳಿಕ
ನದಿಗೆ ಸ್ನಾನಕ್ಕೆ ಹೋದ ಮೂವರು ಯುವಕರು ನೀರುಪಾಲಾದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ನಡೆದಿದೆ.
ಬೆಳ್ತಂಗಡಿ
ತಾಲೂಕಿನ ಮೂಡುಕೋಡಿ ಗ್ರಾಮದ ಮನೆಯೊಂದಕ್ಕೆ ಕಾರ್ಯಕ್ರಮದ
ನಿಮ್ಮಿತ ಬಂದಿದ್ದ ಯುವಕರು ಊಟ ಮೂಗಿಸಿ ಬರ್ಕಜೆ ಡ್ಯಾಂ ಬಳಿ ಸ್ನಾನ ಮಾಡಲು
ಹೋಗಿದ್ದರು ಎಂದು ತಿಳಿದು ಬಂದಿದೆ.
ಮೂಡಬಿದ್ರೆ
ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್(20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್(19) , ಬಂಟ್ವಾಳ ಗ್ರಾಮದ ವಗ್ಗದ ಜೈಸನ್(19) ನೀರಿನ
ಸೆಳೆತಕ್ಕೆ ಸಿಲುಕಿ ನೀರುಪಾಲಾದವರು.
ಮೂವರ ಮೃತದೇಹ ನೀರಿನಿಂದ ಹೊರತೆಗೆಯಲಾಗಿದ್ದು. ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.