ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು:ಚಾಲಕ ಮಾಡಿದ್ದೇನು?

Kadaba Times News


 ಕಡಬ ಟೈಮ್ , ಸುಳ್ಯ: ಸುಳ್ಯ-ಸುಬ್ರಹ್ಮಣ್ಯದ ಕಾಡಂಚಿನ ಪ್ರದೇಶಗಳಲ್ಲಿ ರಾತ್ರಿ ಸಾಮಾನ್ಯವಾಗಿ ಕಾಡಾನೆಗಳು ಓಡಾಟ ಮಾಡುವುದು ಸಾಮಾನ್ಯವಾಗಿದೆ. ಇದೀಗ ಸುಳ್ಯದ ಮರ್ಕಂಜದಲ್ಲಿ ತಡ ರಾತ್ರಿ ಮುಖ್ಯ ರಸ್ತೆಯಲ್ಲಿಯೇ ಕಾಡಾನೆ ಸಂಚರಿಸಿದೆ.


ಮೈಸೂರಿನಂತ ಬಾಡಿಗೆಗೆ ತೆರಳಿ ವಾಪಾಸು ಬರುತ್ತಿದ್ದ ವಾಹನವೊಂದಕ್ಕೆ ಹೈದಂಗೂರು ರಸ್ತೆಯ ಮಧ್ಯೆ 2 ಕಾಡಾನೆಗಳು ಎದುರಾದ ಘಟನೆ ನ.17ರಂದು ನಡೆದಿದ್ದು  ಚಾಲಕ  ಜಾಣತನದಿಂದ ಆನೆಗಳು ಹೋದ ಬಳಿಕ ವಾಹನವನ್ನು ಚಲಾಯಿಸಿಕೊಂಡು ಮುಂದೆ ಸಾಗಿದ್ದಾರೆ


ಯಶಸ್ವಿ ಹೆಸರಿನ  ವ್ಯಾನ್ ಪ್ರಯಾಣಿಕರನ್ನು ಬಿಟ್ಟು, ರಾತ್ರಿ 3 ಗಂಟೆಗೆ ಮರಳಿ ಮರ್ಕಂಜ ಬಳಿಯ ಮಿತ್ತಡ್ಕದ ತನ್ನ ಮನೆಗೆ ಬರುತ್ತಿದ್ದಾಗ ಆನೆಗಳು ಎದುರಾಗಿದೆ.  ಚಾಲಕ  ನಾಗರಾಜ ರವರು ವ್ಯಾನನ್ನು ಸ್ವಲ್ಪ ಹೊತ್ತು ನಿಲ್ಲಿಸಿ  ಬಳಿಕ ಕಾಡಾನೆಗಳು ರಸ್ತೆಯಿಂದ ಕಾಡೊಳಗೆ ಇಳಿದು ಹೋದ ನಂತರ ನಾಗಾರಾಜರು ತಮ್ಮ ವಾಹನವನ್ನುಚಾಲಾಯಿಸಿಕೊಂಡು ಹೋಗಿದ್ದಾರೆ.


ಉಬರಡ್ಕ ಭಾಗದಲ್ಲಿದ್ದ ಕಾಡಾನೆಗಳು  ಹೈದಂಗೂರುಕೊರತ್ತೋಡಿ ಭಾಗದಲ್ಲಿ ಬೀಡು ಬಿಟ್ಟಿದ್ದು, .17 ಸಂಜೆ ರಸ್ತೆ ಬದಿಗೆ ಬಂದು, ಹೈದಂಗೂರು ಕಾಡಿನತ್ತ ಹೆಜ್ಜೆ ಹಾಕಿದ್ದವು .

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top