ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿನಿ ಮೃತ್ಯು

Kadaba Times News

 

ಮೃತ ವಿದ್ಯಾರ್ಥಿನಿ ಪ್ರಿಯಾಂಕಾ ಡಿಸೋಜ(

ಕೊಕ್ಕಡ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.


ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ – ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿಸೋಜ(19) ಮೃತಪಟ್ಟ ಯುವತಿ.  


ನ.5ರಂದು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್  ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ವಿಷ ಪದಾರ್ಥ ಸೇವಿಸಲು ಕಾರಣವೇನೆಂದು ತಿಳಿದು ಬಂದಿಲ್ಲ.


ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು.  ನ.5ರಂದು ಪ್ರಾಂಶುಪಾಲರು  ಕಾಲೇಜಿಗೆ ರಜೆ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top