ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕ ಮೃತ್ಯು

ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕ ಮೃತ್ಯು

Kadaba Times News

 ಕಡಬ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕನೋರ್ವ  ಮೃತಪಟ್ಟ ಘಟನೆ ಶನಿವಾರ ನಡೆದಿರುವುದಾಗಿ ವರದಿಯಾಗಿದೆ.


ಮರ್ದಾಳ ಸಮೀಪದ  ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ ಯುವಕ ಎಂದು ಗುರುತಿಸಲಾಗಿದೆ. 

ಇತ್ತೀಚೆಗೆ ಸಣ್ಣ ಅಪಘಾತವೊಂದರಿಂದ  ವೃಷಣದ ಸಮೀಪ ಗಾಯವಾಗಿತ್ತು ಎನ್ನಲಾಗಿದ್ದು ಸ್ಥಳೀಯವಾಗಿ ಚಿಕಿತ್ಸೆ ಪಡೆದಿದ್ದರು. ವೈದ್ಯರ ಸಲಹೆ ಮೇರೆಗೆ  ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆ ದಾಖಲಿಸಲಾಗಿದ್ದರು.

 ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top