




ಕಡಬ : ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಆನ್ಸ್ ಶಾಲೆಯ ವಿದ್ಯಾರ್ಥಿಗಳನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಕರೆದೊಯ್ದು ಸ್ವಾಗತಿಸಲಾಯಿತು.
ಅವನಿ ಪಿ. ಬಿ ಮತ್ತು ರಾಜ್ಯ ಮಟ್ಟದಲ್ಲಿ 4×100 ರಿಲೇಯಲ್ಲಿ ನಾಲ್ಕನೇ ಸ್ಥಾನ ಪಡೆದ ಪ್ರಣಾಮ್ ಪಿ ಬಿ, ನಾಯ್ಕ್, ಸವೀಶ್, ಸಾತ್ವಿಕ್ ರೈ, ಆಶ್ಲೇಷ್ ಇವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.ಸಂಸ್ಥೆಯ ಸಂಚಾಲಕ ವಂ ಪ್ರಕಾಶ್ ಪೌಲ್ ಡಿಸೋಜಾ ಚಾಲನೆ ನೀಡಿದರು.ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲ ವಂ ಅಮಿತ್ ಪ್ರಕಾಶ್ ರೋಡ್ರಿಗಸ್, ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಜೇಸಿಂತ ವೇಗಸ್, ಸೈಂಟ್ ಜೋಕಿಮ್ ಪಿ ಯು ಕಾಲೇಜ್ ಪ್ರಾಂಶುಪಾಲ ಕಿರಣ್ ಕುಮಾರ್, ಸೈಂಟ್ ಆನ್ಸ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ದಕ್ಷಾ, ಪೋಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.