ನಾಳೆ (ನ.24) ಕಡಬದಲ್ಲಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಇದರ ತಾಲೂಕು ಘಟಕದ ಪದಗ್ರಹಣ ಕಾರ್ಯಕ್ರಮ

Kadaba Times News

 




ಕಡಬ: ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ (ರಿ)ಇದರ ತಾಲೂಕು ಘಟಕದ ಪದಗ್ರಹಣ ಕಾರ್ಯಕ್ರಮವು .24 ರಂದು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:30ಕ್ಕೆ ನಡೆಯಲಿದೆ.


ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಆಯುಷ್ಮಾನ್ ಮತೀನ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಕಡಬ ಠಾಣಾ ಉಪನಿರೀಕ್ಷಕ ಅಭಿನಂದನ್ ಅವರು ಉದ್ಘಾಟಿಸಲಿದ್ದಾರೆ.  ಸಂಘಟನೆಯ ರಾಜ್ಯ ಉಪಾಧ್ಯಕ್ಷ  ಜಯಕುಮಾರ್ ಹಾದಿಗೆ  ದಿಕ್ಸೂಚಿ ಭಾಷಣ ಮಾಡಲಿದ್ದಾರೆ.


ಮುಖ್ಯ ಅಥಿತಿಗಳಾಗಿ ಹಾಸನ ಜಿಲ್ಲಾಧ್ಯಕ್ಷ  ಪ್ರದೀಪ್ ಹೆಚ್.ಎಸ್ , ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಿಂಗರಾಜು ಜಿ.ಎಸ್ ಬೆಣಕಲ್ ,ಧರ್ಮ ಪ್ರಚಾರಕ   ದಿನೇಶ್ ಮುಳೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ,ಕರಾವಳಿ ಕರ್ನಾಟಕ ಉಸ್ತುವಾರಿ    ರಾಮದಾಸ್ ಮೇರಾಮಜಲ್ ,  ದಕ್ಷಿಣ ಕರ್ನಾಟಕ ಅಧ್ಯಕ್ಷ ಗಿರೀಶ್ ಕೆ.ಬಿ , . ಜಿಲ್ಲಾಧ್ಯಕ್ಷ  ವಿವೇಕಾನಂದ ಶಿರ್ತಾಡಿ,ಹಾಸನ ಜಿಲ್ಲಾ ಉಪಾಧ್ಯಕ್ಷ  ನವೀನ್ ಸಾಲಗಾಮೆ, ಹಾಸನ ತಾಲೂಕು ಅಧ್ಯಕ್ಷ  ಹೇಮಂತ್ ಡಿ.ಕೆ, ಶಿಕ್ಷಕ  ಶೇಖರ್ ಅತ್ನಿ, ಸುಳ್ಯ ತಾಲೂಕು ಅಧ್ಯಕ್ಷ  ವಸಂತ್ ಕುದ್ದಾಜೆ, ಅಲೂರು ತಾಲೂಕು ಅಧ್ಯಕ್ಷ  ಜಗದೀಶ್ ನಿಡನೂರು ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ  ಹಿರಿಯ ದಲಿತ ಮುಖಂಡ ತನಿಯಪ್ಪ ಬೆದ್ರೋಳಿಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲ್ಲಿದೆ ಎಂದು  ಭೀಮ್ ಆರ್ಮಿ ಕಡಬ ತಾಲೂಕು ಅಧ್ಯಕ್ಷ ರಾಘವ ಕಳಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top