ಜೋಕಾಲಿಯಲ್ಲಿ ಆಟ ಆಡುತ್ತಿದ್ದ ವೇಳೆ ದುರ್ಘಟನೆ: ಕುತ್ತಿಗೆಗೆ ಹಗ್ಗ ಸಿಲುಕಿ ವಿಟ್ಲದ ಬಾಲಕಿ ಮೃತ್ಯು

ಜೋಕಾಲಿಯಲ್ಲಿ ಆಟ ಆಡುತ್ತಿದ್ದ ವೇಳೆ ದುರ್ಘಟನೆ: ಕುತ್ತಿಗೆಗೆ ಹಗ್ಗ ಸಿಲುಕಿ ವಿಟ್ಲದ ಬಾಲಕಿ ಮೃತ್ಯು

Kadaba Times News

 

ಮೃತ ಬಾಲಕಿ ತೀರ್ಥಶ್ರೀ (ಕಡಬ ಟೈಮ್)

ಕಡಬ ಟೈ,ಮ್ಸ್ , ವಿಟ್ಲ:  ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ  ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 ಬಂಟ್ವಾಳತಾಲೂಕಿನಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಭಾನುವಾರ (ಡಿ.8ರಂದು) ಸಂಜೆ ವೇಳೆ ಈ ಘಟನೆ  ನಡೆದಿದೆ.

ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಜೋಕಾಲಿಗೆ ಬಲಿಯಾದ ಬಾಲಕಿ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆಗೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಘಟನೆ ನಡೆದಿದೆ.

ವಿಟ್ಲ ಪೋಲಿಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top