ಕುಕ್ಕೆ ಸುಬ್ರಹ್ಮಣ್ಯ:ಬೆಳ್ಳಂಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ಅಯ್ಯಪ್ಪ ಮಾಲೆಧಾರಿ ಮೇಲೆ ಕಾಡಾನೆ ದಾಳಿ:ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

Kadaba Times News
ಕಾಡಾನೆಯ ಚಿತ್ರ ಸೆರೆ ಹಿಡಿದಿರುವುದು( ಕಡಬ ಟೈಮ್ಸ್)

ಕುಕ್ಕೆ ಸುಬ್ರಹ್ಮಣ್ಯ: ಬೆಳ್ಳಂಬೆಳಗ್ಗೆ  ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.


ಕಲ್ಮಕಾರು ಗ್ರಾಮದ ಚರಿತ್ ಎಂಬವರು ದಾಳಿಗೆ ಒಳಾಗದ ಯುವಕ ಎಂದು ತಿಳಿದು ಬಂದಿದೆ.


ಡಿ.17 ರ ಮುಂಜಾನೆ ಈ ಘಟನೆ ನಡೆದಿದ್ದು  ಸ್ನಾನದ ಬಳಿಕ ನೀರಿನ ತೋಡಿನಲ್ಲಿ   ಬಟ್ಟೆ ತೊಳೆಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.


ಅಯ್ಯಪ್ಪ ವೃತಧಾರಿಗಳು ತಂಗುವ ಟೆಂಟ್ ಸಮೀಪದಲ್ಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

 

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top