




ಕಡಬ: ಮರವೊಂದಕ್ಕೆ ಬಟ್ಟೆಯನ್ನು ಕಟ್ಟಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಗ್ರಾಮದ ಆನೆಕಲ್ಲು ಎಂಬಲ್ಲಿ ನ.30ರಂದು ನಡೆದಿದೆ.
ಕಡಬ ತಾಲೂಕು ಕೊಣಾಜೆ ಗ್ರಾಮದ ಕಡ್ಯದ ಚಂದ್ರಶೇಖರ ಎಂಬವರು ಆತ್ಮಹತ್ಯೆ ಮಾಡಿಕೊಂಡವರು.
ಆನೆಕಲ್ಲು ಎಂಬಲ್ಲಿರುವ ಅರಣ್ಯ ಇಲಾಖೆಗೆ ಸಂಬಂಧಪಟ್ಟ ಸ್ಥಳದಲ್ಲಿ ಒಂದು ಮರಕ್ಕೆ ಬಟ್ಟೆಯನ್ನು ಕಟ್ಟಿ ಅದರ ಇನ್ನೊಂದು ತುದಿಯನ್ನು ಕುತ್ತಿಗೆಗೆ ಕಟ್ಟಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಯುಡಿಆರ್ ನಂಬ್ರ: 37/2024 ಕಲಂ: 194 BNSS ಯಂತೆ ಪ್ರಕರಣ ದಾಖಲಾಗಿದೆ.