




ಕಡಬ: ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಬಳಿಕ ಮೃತಪಟ್ಟ ಘಟನೆಯೊಂದು ಎಡಮಂಗಲ ಗ್ರಾಮದಿಂದ ವರದಿಯಾಗಿದೆ.
ಕಡಬ ತಾಲೂಕು ಎಡಮಂಗಲ ಗ್ರಾಮದ ಡೆಕ್ಕಲದ ಶೀಲಾವತಿ ಎಂಬವರು ಮೃತಪಟ್ಟವರು
ದಿನೇಶ್ ಎಂಬವರನ್ನು 13 ವರ್ಷಗಳ ಹಿಂದೆ ಮದುವೆ ಆಗಿದ್ದರು. ಮಕ್ಕಳಾಗದ ಕಾರಣಕ್ಕೆ
ಇತ್ತಿಚಿಗೆ ಚಿಕಿತ್ಸೆ ಪಡೆದ ಬಳಿಕ ಸುಮಾರು 4 ತಿಂಗಳ ಗರ್ಭಿಣಿ ಆಗಿದ್ದರು. ಇದರಿಂದ ಕುಟುಂಬದಲ್ಲಿ
ಸಂಭ್ರಮವಿತ್ತು.
ಅನಾರೋಗ್ಯದ ಹಿನ್ನೆಲೆ ವಾರದ ಹಿಂದೆ ತವರು ಮನೆಯಾದ ಸುಳ್ಯದ ಪಂಬೆತ್ತಾಡಿ ಗ್ರಾಮದ ಕರಿಕಳಕ್ಕೆ ಹೋಗಿ ಅಲ್ಲಿಯೇ ಇದ್ದರು. ಡಿ18 ಆರೋಗ್ಯ ಸರಿಯಿಲ್ಲ ಎಂದು
ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಬಳಿಕ ಅಲ್ಲಿಯ ವೈದ್ಯರು ಪರೀಕ್ಷಿಸಿ ಹೆಚ್ಚಿನ
ಚಿಕಿತ್ಸೆ ಬಗ್ಗೆ ಮಂಗಳೂರಿನ ಫಾದರ್ ಮುಲ್ಲಾರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಪರೀಕ್ಷಿಸಿ ಓಳರೋಗಿಯಾಗಿ ದಾಖಲಿಸಿಕೊಂಡಿದ್ದರು. ಬಳಿಕ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ದಿನೇಶ್ ಅವರ ತಮ್ಮ ಮೋಹನ ಎಂಬವರು
ಸುಬ್ರಹ್ಮಣ್ಯ ಠಾಣೆಗೆ ನೀಡಿದ ದೂರಿನಂತೆ UDR
NO: 26/2024 ಕಲಂ: 194 BNSS 2023 ಯಂತೆ ಪ್ರಕರಣ ದಾಖಲಾಗಿರುತ್ತದೆ.