




ಕಡಬ ಟೈಮ್ಸ್, ಸವಣೂರು: ಇತ್ತೀಚೆಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಯ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕಡಬ ತಾಲೂಕು ಸವಣೂರಿನ ಯುವತಿಯೋರ್ವಳು ತೇರ್ಗಡೆ ಹೊಂದಿ ಎಸ್. ಐ ಹುದ್ದೆಗ ಆಯ್ಕೆಯಾಗಿದ್ದಾರೆ.
![]() |
ಸವಣೂರಿನ ಅಖಿಲ ಪೂಜಾರಿ |
ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾದ ಯುವತಿ.ಇನ್ನಷ್ಟೇ ನೇಮಕಾತಿ ಪ್ರಕ್ರಿಯೆಗೆ ಆಗಬೇಕಾಗಿದೆ.
ಪ್ರಾಥಮಿಕ ವಿದ್ಯಾಭ್ಯಾಸವನ್ನು ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ , ಪ್ರೌಢ ಶಿಕ್ಷಣವನ್ನು ಕುಲಶೇಖರದ ಸಂತ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಪೂರೈಸಿದ್ದಾರೆ.ಮಂಗಳೂರು ಸಂತ ಆಗ್ನೇಸ್ ಕಾಲೇಜಿನಲ್ಲಿ ಪದವಿಪೂರ್ವ ಮತ್ತು ಪದವಿ ಶಿಕ್ಷಣ ಪಡೆದಿದ್ದಾರೆ.
ಇವರು ಮಂಗಳೂರು ಸಿಸಿಬಿಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕ ಸವಣೂರು ದೇವಸ್ಯದ ಶೀನಪ್ಪ ಪೂಜಾರಿ ಮತ್ತು ಹೇಮಾವತಿ ಬಂಬಿಲ ದೋಳ ಅವರ ಪುತ್ರಿ.ಯಾಗಿದ್ದಾರೆ.