ರಬ್ಬರ್ ತೋಟಕ್ಕೆ ಉಪಯೋಗಿಸುವ ಆಸಿಡ್ ಸೇವನೆ ಮಾಡಿದ ಶಿರಾಡಿಯ ವ್ಯಕ್ತಿ ಮೃತ್ಯು

Kadaba Times News

ಕಡಬ ಟೈಮ್, ಶಿರಾಡಿ: ಇಲ್ಲಿನ ಶಿರಾಡಿ ಗ್ರಾಮದ ಕಳಪ್ಪಾರು ಎಂಬಲ್ಲಿ ವ್ಯಕ್ತಿಯೊಬ್ಬರು ಆಸಿಡ್ ಸೇವಿಸಿ ಮೃತಪಟ್ಟ ಘಟನೆ ವರದಿಯಾಗಿದೆ.

 


ಯಾವುದೋ ಕಾರಣಕ್ಕೆ ಮನನೊಂದು ರಬ್ಬರ್ ತೋಟಕ್ಕೆ ಉಪಯೋಗಿಸುವ ಆಸಿಡ್ ಸೇವನೆ ಮಾಡಿ ಬೊಬ್ಬೆ ಹೊಡೆಯುತ್ತಿದ್ದವರನ್ನು  108 ಅಂಬ್ಯುಲೆನ್ಸ್ ನಲ್ಲಿ ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತಂದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರಿಗೆ ಕರೆದುಕೊಂಡು ಹೋಗುವಂತೆ  ತಿಳಿಸಿದ್ದರು.

 

ಆಸ್ಪತ್ರೆಯ ಅಂಬ್ಯುಲೆನ್ಸ್  ನಲ್ಲಿ ಕಳುಹಿಸಿ ಕೊಟ್ಟಿದ್ದು, ಮಂಗಳೂರು ಆಸ್ಪತ್ರೆಗೆ ಹೋಗುವ ಸಮಯ ದಾರಿ ಮಧ್ಯೆ ಯಾವುದೇ ರೀತಿಯಲ್ಲಿ ಸ್ಪಂದಿಸದೇ ಇದ್ದ ಕಾರಣ ವಾಪಾಸು ಪುತ್ತೂರು ಸರಕಾರಿ ಆಸ್ಪತ್ರೆಗೆ ಬಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.  ಈ ಬಗ್ಗೆ ಮಂಜುಪ್ರಸಾದ್ ಎಂಬವರು  ನೀಡಿದ ದೂರಿನಂತೆ  ಉಪ್ಪಿನಂಗಡಿ ಪೊಲೀಸ್ಠಾಣಾ ಯುಡಿಆರ್ ನಂಬ್ರ: 02/2025 ಕಲಂ: 194 BNSS ಯಂತೆ ಪ್ರಕರಣ ದಾಖಲಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top