ಬೆಳ್ಳಾರೆಯಲ್ಲಿ ಬೈಕ್ ನಲ್ಲಿ ಬರುತ್ತಿದ್ದ ಯುವಕನ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಹಲ್ಲೆ: ಓರ್ವನ ಬಂಧನ

ಬೆಳ್ಳಾರೆಯಲ್ಲಿ ಬೈಕ್ ನಲ್ಲಿ ಬರುತ್ತಿದ್ದ ಯುವಕನ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಹಲ್ಲೆ: ಓರ್ವನ ಬಂಧನ

Kadaba Times News

 ಕಡಬ ಟೈಮ್ಸ್, ಬೆಳ್ಳಾರೆ:  ಬೆಳ್ಳಾರೆ ಪೇಟೆಯಲ್ಲಿ ಮತ್ತೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅಟ್ಟಹಾಸ ಮೆರೆದಿರುವ ಘಟನೆ ವರದಿಯಾಗಿದ್ದು  ಯುವಕನೊಬ್ಬನ ಕೊಲೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ  



 ಯುವಕನೊಬ್ಬನ ಮೇಲೆ ಮಾರಣಾಂತಿಕ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ  ಆರೋಪ ಕೇಳಿ ಬಂದಿದ್ದು  ಶನಿವಾರ ರಾತ್ರಿ ರೌಡಿಶೀಟರ್‌ಗಳು ಈ ಕೃತ್ಯಕ್ಕೆ ಮುಂದಾಗಿರುವುದಾಗಿ ತಿಳಿದು ಬಂದಿದೆ.


ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡಿನಿಂದ ತಲ್ವಾರನ್ನು ಹೋಲುವ ಆಯುಧ ದಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.


ಗಾಯಾಳು ಯುವಕನನ್ನು ಬೆಳ್ಳಾರೆ ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿ ಓರ್ವ  ಆರೋಪಿ ಅಜರುದ್ದೀನ್‌ನನ್ನು ಬೆಳ್ಳಾರೆ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top