ಪ್ರಿ ವೆಡ್ಡಿಂಗ್ ಶೂಟಿಂಗ್ ಮುಗಿಸಿ ತೆರಳುತ್ತಿದ್ದರ ಕಾರು ಅಪಘಾತ: ಭಾವಿ ವಧುವರ ಸಹಿತ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲು

Kadaba Times News

ಕಡಬ ಟೈಮ್, ನೆಲ್ಯಾಡಿ:  ವಿವಾಹಪೂರ್ವ ಶೂಟಿಂಗ್ ನಡೆಸಲೆಂದು ಬೆಂಗಳೂರಿನಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ತಂಡವಿದ್ದ ಕಾರೊಂದು ನೆಲ್ಯಾಡಿಯ ಕೋಣಾಲು ಬಳಿ ಅಪಘಾತಕ್ಕೀಡಾಗಿ ಭಾವಿ ವಧುವರರ ಸಹಿತ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.



ಬೆಂಗಳೂರಿನ ನೆಲಮಂಗಲದ ನಿವಾಸಿಗರಾದ ವಿವಾಹ ನಿಶ್ಚಿತಾರ್ಥವಾಗಿದ್ದ ಭಾವಿ ವರ ಹಾಗೂ ಭಾವಿ ವಧು , ಮತ್ತಾಕೆಯ ಬ್ಯೂಟೀಷಿಯನ್ ಹಾಗೂ ಕಾರು ಚಾಲಕರ ತಂಡ ಬೆಂಗಳೂರಿನಿಂದ ಕಾರಿನಲ್ಲಿ ಪ್ರಯಾಣಿಸಿ ಮೇಲುಕೋಟೆಯಲ್ಲಿ ಶ್ಯೂಟಿಂಗ್ ಮುಗಿಸಿದ್ದರು.


ನಂತರ ಉಡುಪಿಯತ್ತ ಪ್ರಯಾಣಿಸುತ್ತಿದ್ದಾಗ ಬೆಂಗಳೂರು-ಮಂಗಳೂರು ಹೆದ್ದಾರಿಯ  ಕಡಬ ತಾಲೂಕು ಕೋಣಾಲು ಗ್ರಾಮದ ಕರ್ಬ ಸಂಕ ಎಂಬಲ್ಲಿ ರಾತ್ರಿ ವೇಳೆ ಅಪಘಾತಕ್ಕೀಡಾಗಿತ್ತು. ಇದರಿಂದ ಕಾರಿನಲ್ಲಿದ್ದ ನಾಲ್ವರಿಗೂ ಗಂಬೀರ ಸ್ವರೂಪದ ಗಾಯಗಳಾಗಿದೆ.


ಈ ತಂಡದ ಶ್ಯೂಟಿಂಗ್ ಸಿಬ್ಬಂದಿಗಳು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಅಪಘಾತಕ್ಕೀಡಾಗಿರುವುದನ್ನು ಕಂಡು ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಅಪಘಾತದಿಂದ ಭಾವಿ ವಧುವರರ ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top