




ಕಡಬ ಟೈಮ್, ಕೊಕ್ಕಡ: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಹಿಂದೂ ಯುವಕನ ಜತೆ ಮದುವೆಯಾಗಿ ಪತ್ತೆ ಪ್ರತ್ಯಕ್ಷವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಸಮೀಪದ ಪಟ್ರಮೆ ಗ್ರಾಮದಿಂದ ವರದಿಯಾಗಿದೆ.
ಪ್ರೀತಿಸಿ
ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಹರೀಶ್ ಗೌಡ-ಸುಹಾನಾ ವಿವಾಹವಾಗಿರುವುದಾಗಿ ತಿಳಿದು ಬಂದಿದ್ದು ಬಳಿಕ ಜೋಡಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.
ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು ಎನ್ನಲಾಗಿದೆ
ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.
ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರಿಸಿರುವುದಾಗಿ ತಿಳಿದು ಬಂದಿದೆ.