




ಕಡಬ ಟೈಮ್, ಸುಬ್ರಹ್ಮಣ್ಯ: ಹೆಸರಾಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿದ್ದಾರೆ.
ದೇವರ ದರ್ಶನದ ಬಳಿಕ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ 10 ಲಕ್ಷ ರೂ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅತ್ಲೇ ಅವರನ್ನು ಶಾಲು ಹೊಂದಿಸಿ ಸ್ಮರಣೆಗೆ ನೀಡಿ ಗೌರವಿಸಿದರು. ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮರಾವ್ ಉಪಸ್ಥಿತರಿದ್ದರು.