ಕಡಬ:ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ಹೇಳಿ ಮನೆಯಿಂದ ಹೋದ ಯುವತಿ ಸ್ಕೂಟಿಯನ್ನು ಅರ್ಧದಾರಿಯಲ್ಲೇ ನಿಲ್ಲಿಸಿ ನಾಪತ್ತೆ

Kadaba Times News

ಕಡಬ ಟೈಮ್, ಕಾಣಿಯೂರು: ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ಮನೆಯಿಂದ ಹೋದ ಯುವತಿಯೋರ್ವಳು ತನ್ನ ಸ್ಕೂಟಿಯನ್ನು ಅರ್ಧದಲ್ಲೇ ನಿಲ್ಲಿಸಿ ನಾಪತ್ತೆಯಾಗಿದ್ದು ಹೆತ್ತವರು ಕಡಬ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.


ಕಾಣಿಯೂರು ಸಮೀಪದ ಚಾರ್ವಾಕ ಗ್ರಾಮದ ಅಂಬುಲ ನಿವಾಸಿ ದೀಕ್ಷಾ (24ವ) ನಾಪತ್ತೆಯಾದ ಯುವತಿ. 



ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದ ಈಕೆ ರಜೆ ಮಾಡಿ ಜ.1 ರಂದು ಊರಿಗೆ ಬಂದು ಮನೆಯಲ್ಲೆ ಉಳಿದುಕೊಂಡಿದ್ದಳು. ಜ.14 ರಂದು  ಸಂಜೆ ಬಟ್ಟೆ ಹೊಲಿಯಲು ಅಂಗಡಿಗೆ ಹೋಗಿ ಬರುವುದಾಗಿ ಹೋದಾಕೆ ಕತ್ತಲಾದರೂ ಮನೆಗೆ ಬಂದಿರಲಿಲ್ಲ. ಮನೆ ಮಂದಿ ಹುಡುಕಾಡಿದ ಸಂದರ್ಭದಲ್ಲಿ ಸುಮಾರು 1 ಕಿ.ಮೀ ದೂರದ ರಸ್ತೆಯೊಂದರಲ್ಲಿ ಸ್ಕೂಟಿ ಮಾತ್ರ ಪತ್ತೆಯಾಗಿದೆ. 


ಆಕೆಯ ಮೊಬೈಲ್ ಗೆ ಕರೆ ಮಾಡಿದರೂ ಸ್ವೀಚ್ ಆಫ್ ಬರುತ್ತಿತ್ತು. ಪರಿಚಯಸ್ಥರಲ್ಲಿ ವಿಚಾರಿಸಿದಾಗ ಆಕೆ ಕೆಲಸ ಮಾಡುತ್ತಿದ್ದ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ  ಅಂಬರೀಶ್ ಮತ್ತು ಗೆಳೆಯರ ಬಗ್ಗೆ ಸಂಶಯ ವ್ಯಕ್ತಪಡಿಸಿ ಯುವತಿಯ ತಂದೆ ಚಂದ್ರಶೇಖರ ಅವರು ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು  ಭಾರತೀಯ ನ್ಯಾಯ ಸಂಹಿತಾ ಕಾಯ್ದೆಯಡಿ (BNS), 2023 (U/s-00MP) ಪ್ರಕರಣ ದಾಖಲಿಸಿಕೊಂಡಿದ್ದಾರೆ.



#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top