ಕಡಬ:ಚರ್ಚ್ ಗೆ ಹೋದ ಸಮಯದಲ್ಲಿ ಮನೆಯಿಂದ ನಗ -ನಗದು ದೋಚಿದ ಕಳ್ಳರು

Kadaba Times News

ಕಡಬಟೈಮ್ಸ್, ಮರ್ದಾಳ : ಕಡಬ ತಾಲೂಕಿನ 102ನೇ ನೆಕ್ಕಿಲಾಡಿ ಗ್ರಾಮದ ಮರ್ದಾಳ ಸಮೀಪದ ಡೆಕ್ಕಂಪಾಡಿಯಲ್ಲಿ ಹಾಡುಹಗಲೇ ಮನೆಗೆ ನುಗ್ಗಿರುವ ಕಳ್ಳರು ನಗ ಹಾಗೂ ನಗದು ದೋಚಿ ಪರಾರಿಯಾಗಿರುವ  ಘಟನೆ ಸಂಭವಿಸಿದೆ.



ಅಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ್  ಅವರು ಪತ್ನಿ ಹಾಗೂ ಮಗನೊಂದಿಗೆ ಮನೆಗೆ ಬೀಗ ಹಾಕಿ ರವಿವಾರ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದ ವೇಳೆ ಘಟನೆ ನಡೆದಿದೆ.


ಸಂಜೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಅಂದಾಜು 2.5 ಲಕ್ಷ ರೂ, ಮೌಲ್ಯದ ಚಿನ್ನಾಭರಣ ಕಳವು ಆಗಿದೆ ಎನ್ನಲಾಗಿದೆ ಬಗ್ಗೆ ಕಡಬ ಪೊಲೀಸು ಠಾಣೆಯಲ್ಲಿ .ಕ್ರ : 02/2025 ಕಲಂ:331(3),305, BNS ರಂತೆ ಪ್ರಕರಣ ದಾಖಲಾಗಿರುತ್ತದೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top