




ಕಡಬ: ಇಲ್ಲಿನ ಠಾಣಾ ವ್ಯಾಪ್ತಿಯ ಆಲಂಕಾರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಗುರುತು ಪತ್ತೆಗೆ ಪೊಲೀಸರು ಪ್ರಕಟಣೆ ಹೊರಡಿಸಿದ್ದರು. ಮೃತ ವ್ಯಕ್ತಿಯ ಕುಟುಂಬಸ್ಥರು ಸಂಪರ್ಕಕ್ಕೆ ಸಿಕ್ಕಿರುವುದಾಗಿ ತಿಳಿದು ಬಂದಿದೆ.
ಕೇರಳ
ಮೂಲದ ತಂಗಚ್ಚನ್
(70ವ) ಎಂಬ
ಹೆಸರಿನ ವ್ಯಕ್ತಿಯು
ಅಲಂಕಾರು ಪರಿಸರದಲ್ಲಿ ಸುಮಾರು ಮೂರು
ವರ್ಷದಿಂದ ಕೂಲಿ ಕೆಲಸ ಮಾಡಿಕೊಂಡಿದ್ದರು. ಜ. 9 ರಂದು ಮುಂಜಾನೆ ಅಸೌಖ್ಯಗೊಂಡು
ಮಲಗಿದಲ್ಲಿಯೇ ಮೃತಪಟ್ಟಿರುವುದು ಕಂಡು ಬಂದಿದೆ.
![]() |
ಮಲಗಿದಲ್ಲಿಯೇ ಮೃತ ಪಟ್ಟ ತಂಗಚ್ಚನ್ ಹೆಸರಿನ ವ್ಯಕ್ತಿ |
ಮೃತ ವ್ಯಕ್ತಿ ತಂಗಚ್ಚನ್ ಎಂದು ಹೆಸರು ಹೇಳುತ್ತಿದ್ದು ಆತನ ವಿಳಾಸ ತಿಳಿದು ಬಂದಿರುವುದಿಲ್ಲ ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಅಬೂಬುಕ್ಕರ್ ಎಂಬವರು ನೀಡಿದ ದೂರಿನಂತೆ ಯು ಡಿ. ಆರ್ ನಂಬ್ರ: 01-2025 ಕಲಂ: 194(3), (iv) ಬಿ ಎನ್ ಎಸ್ ಎಸ್ ರಂತೆ ಪ್ರಕರಣ ದಾಖಲಾಗಿತ್ತು.
ಮೃತರ ಬಗ್ಗೆ ಯಾವುದಾದರೂ ಮಾಹಿತಿ ದೊರೆತಲ್ಲಿ ಅಥವಾ ಬೇರೆ ಯವುದಾದರೂ ಠಾಣೆಯಲ್ಲಿ ಕಾಣೆಯಾದ ಪ್ರಕರಣ ದಾಖಲಾದಲ್ಲಿ ಕಡಬ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಠಾಣಾ ಎಸ್.ಐ ಅಭಿನಂದನ್ ಅವರು ಪ್ರಕಟಣೆ ಹೊರಡಿಸಿದ್ದರು. ಇದೀಗ ಮೃತ ವ್ಯಕ್ತಿಯ ಕುಟುಂಬಸ್ಥರು ಸಂಪರ್ಕಕ್ಕೆ ಸಿಕ್ಕಿರುವುದಾಗಿ ತಿಳಿದು ಬಂದಿದೆ.