ಹೊಸ ವರ್ಷ ಪ್ರಯುಕ್ತ ಸಿಹಿ ಹಂಚಿದ್ದು ಹೌದು, ಭಾಷಣ ಮಾಡಿದ್ದೂ ಹೌದು, ಆದರೆ...

Kadaba Times News

 ಕಡಬ ಟೈಮ್, ದ.ಕ: ಕೋರ್‌ ಕಮಿಟಿ ಸಭೆ ವೇಳೆ  ವಿಧಾನ ಪರಿಷತ್‌ ಸದಸ್ಯ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರೂ ಆಗಿರುವ    ಹರೀಶ್‌ ಕುಮಾರ್‌ ರಾಜೀನಾಮೆ ನೀಡಿದ್ದಾಗಿ ಕೆಲವು ವೆಬ್ಸೈಟ್ಗಳಲ್ಲಿ ಸುದ್ದಿ ಪ್ರಕಟಗೊಂಡಿತ್ತು ಕುರಿತು  ಅಸಮಾಧಾನ ವ್ಯಕ್ತಪಡಿಸಿ ಸ್ಪಷ್ಟನೆ ನೀಡಿದ್ದಾರೆ.



 ನಾನು ರಾಜಕೀಯ ನಿವೃತ್ತಿ ನೀಡಿಲ್ಲಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ  ಇದು ಸತ್ಯಕ್ಕೆ ದೂರವಾದ ಸುದ್ದಿ. ನಾನು ಕೋರ್ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ ಪ್ರಯುಕ್ತ ಸಿಹಿ ಹಂಚಿದ್ದು ಹೌದು, ಭಾಷಣ ಮಾಡಿದ್ದೂ ಹೌದು. ಆದರೆ ಎಲ್ಲೂ ಕೂಡಾ ರಾಜೀನಾಮೆ ನೀಡುವುದಾಗಿ ಹೇಳಿಲ್ಲ ಎಂದು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

 

ಜಿಲ್ಲಾ ಕಾಂಗ್ರಸ್ಅಧ್ಯಕ್ಷನಾಗಿ ಎರಡು ಅವಧಿ ಪೂರ್ಣಗೊಳಿಸಿದ್ದೇನೆ. ಎರಡು ವರ್ಷ ಹಿಂದೆಯೇ ರಾಜಿನಾಮೆ ಕೊಟ್ಟಿದ್ದೆ. ಆದರೆ ಚುನಾವಣೆ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿ ಮುಂದುವರಿಯಲು ಹೈಕಮಾಂಡ್ಸೂಚನೆಯಿತ್ತು. ಏಳು ವರ್ಷ ಏಳು ತಿಂಗಳಿನಿಂದ ಅಧ್ಯಕ್ಷನಾಗಿದ್ದೇನೆ. ಯಾರ ಹೆಸರನ್ನು ಹೈಕಮಾಂಡ್ಪ್ರಕಟಿಸುತ್ತದೋ ಆಗಲೇ ನಾನು ಅಧ್ಯಕ್ಷ ಹುದ್ದೆ ಹಸ್ತಾಂತರಿಸುತ್ತೇನೆ. ರಾಜಕೀಯ ನಿವೃತ್ತಿಯ ಮಾತೇ ಬರುವುದಿಲ್ಲ ಎಂದು ಹರೀಶ್ಕುಮಾರ್ ಸ್ಪಷ್ಟನೆ ನೀಡಿದರು.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top