ನೆಲ್ಯಾಡಿಯಲ್ಲಿ ಜ.29 ರಂದು ಗ್ಯಾರಂಟಿ ಯೋಜನೆಗಳ ನೋಂದಾವಣೆ, ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ

Kadaba Times News



ಕಡಬ ಟೈಮ್, ನೆಲ್ಯಾಡಿ:  ಕಡಬ ತಾಲೂಕಿಗೆ ಸಂಬಂಧಪಟ್ಟ ಕೌಕ್ರಾಡಿ, ನೆಲ್ಯಾಡಿ, ಗೋಳಿತ್ತೊಟ್ಟು ಗ್ರಾಮ ಪಂಚಾಯತ್‌ಗೆ ಒಳಪಟ್ಟ ಗ್ಯಾರಂಟಿ ಯೋಜನೆಗಳ ನೋಂದಾವಣೆಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ  ಜ.29ರಂದು ಬೆಳಿಗ್ಗೆ 10.30ರಿಂದ ಅಪರಾಹ್ನ 2 ಗಂಟೆ ತನಕ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. 


ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾಹಿತಿ ಕೇಂದ್ರ ತೆರೆದು ಅರ್ಜಿಗಳ ವಿಲೇವಾರಿ ಮಾಡಲಿದ್ದಾರೆ. 


ಫಲಾನುಭವಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಿಳಿಸಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top