ಹೆಂಡತಿಯನ್ನೇ ಗುಂಡಿಕ್ಕಿ ಕೊಲೆಗೈದು ತಾನೂ ವಿಷ ಸೇವೆಸಿ ಆತ್ಮಹತ್ಯೆ ಮಾಡಿಕೊಂಡ ಗಂಡ

Kadaba Times News

 ಕಡಬ ಟೈಮ್, ಸುಳ್ಯ:   ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ .17 ಶುಕ್ರವಾರ ತಡರಾತ್ರಿ ನಡೆದಿದೆ.


ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ, ಕೃಷಿಕ ರಾಮಚಂದ್ರ ಗೌಡ ಅಲಿಯಾಸ್ ಚಂದ್ರ (54) ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡವರು.  ಅವರ ಪತ್ನಿ ವಿನೋದ (43) ಹತ್ಯೆಗೊಳಗಾದವರು.  ತನ್ನದೇ ಲೈಸನ್ಸ್ ಹೊಂದಿದ್ದ ಕೋವಿಯಲ್ಲಿ ಕೃತ್ಯ ಎಸಗರುವುದಾಗಿ ತಿಳಿದು ಬಂದಿದೆ.



ಘಟನೆಯ ವಿವರ: ಮೃತ ರಾಮಚಂದ್ರ ಕಳೆದ ರಾತ್ರಿ ಮದ್ಯದ ನಶೆಯಲ್ಲಿ ಬಂದಿದ್ದು, ಊಟ ಮಾಡಿದ ಬಳಿಕ ಕ್ಷುಲ್ಲಕ ಕಾರಣಕ್ಕೆ ಪತ್ನಿ ಹಾಗೂ ಪುತ್ರನೊಡನೆ ಜಗಳ ಆರಂಭಿಸಿದ್ದು, ಬಳಿಕ ಗಲಾಟೆ ವಿಪರೀತವಾಗಿದ್ದು ಅವಾಚ್ಯ‌ ಶಬ್ದಗಳಿಂದ ‌ನಿಂದಿಸಲಾಗಿತ್ತು ಎನ್ನಲಾಗಿದೆ. ಇದು ಮುಂದುವರೆದು ಕೃತ್ಯ ನಡೆದಿದೆ ಎನ್ನಲಾಗಿದೆ.


ಗಲಾಟೆ ವೇಳೆ ರಾಮಚಂದ್ರ ತಾನು ಪರವಾನಗಿ ಹೊಂದಿದ್ದ ಕೋವಿಯಿಂದ‌ ಹಿರಿಯ ಮಗ ಪ್ರಶಾಂತ್ ಗೆ ಗುರಿಯಿಟ್ಟಿದ್ದು ಇದನ್ನು ತಪ್ಪಿಸಲು ಪತ್ನಿ ವಿನೋದ ಕೋವಿಯನ್ನು ಎಳೆದುಕೊಳ್ಳಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.ಪತ್ನಿ  ಮೃತಪಟ್ಟ ಬಳಿಕ ಪತಿ ರಾಮಚಂದ್ರ ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ.


ಈ ವೇಳೆ ಕೋವಿಯನ್ನು ಆಕೆಯ ಮೇಲೆ ಗುರಿಯಿರಿಸಿ‌ ಗುಂಡಿಕ್ಕಿದ್ದು, ಘಟನೆಯಿಂದ‌ ಆಕೆ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತಂತೆ ಮಗ ಪ್ರಶಾಂತ್ ಹೇಳಿಕೆಯಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮಹಜರು ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top