ಕೊಕ್ಕಡದಲ್ಲಿ ನಡೆದ ಕಳ್ಳತನ ಪ್ರಕರಣ :ಇಬ್ಬರು ಆರೋಪಿಗಳ ಬಂಧನ

Kadaba Times News

ಕಡಬ ಟೈಮ್ಸ್, ಕೊಕ್ಕಡ: ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳು ( kadaba times)


ಪ್ರಕರಣದಲ್ಲಿ ಬೆಳ್ತಂಗಡಿ ಗ್ರಾಮಾಂತರ ವೃತ್ತನಿರೀಕ್ಷಕರ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣಾ ಅಧಿಕಾರಿ/ ಸಿಬ್ಬಂದಿಗಳ ತನಿಖಾ ತಂಡವು ಡಿ.30ರಂದು ಆರೋಪಿಗಳಾದ ಮಹಮ್ಮದ್‌ ಇಕ್ಬಾಲ್‌ ಮತ್ತು ಮಹಮ್ಮದ್‌ ಶಹಬಾದ ಎಂಬವರುಗಳನ್ನು ಬಾಡಿ ವಾರೆಂಟ್‌ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪ್ರಕರಣದ ತನಿಖೆಯನ್ನು ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದು, ಅವರಿಂದ ರೂ 20000/- ಹಣವನ್ನು ಸ್ವಾದೀನಪಡಿಸಿಕೊಂಡಿದ್ದಾರೆ.ಅಲ್ಲದೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಧರ್ಮಸ್ಥಳ ಪೊಲೀಸ್‌ ಠಾಣಾ ಅ ಕ್ರ 72/2024 ಕಲಂ:305 ಬಿ ಎನ್‌ ಎಸ್‌ ರಂತೆ ಪ್ರಕರಣ ದಾಖಲಾಗಿತ್ತು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top