ಜಂಟಿ ಸರ್ವೆಗೆ ಅಗ್ರಹಿಸಿ ಕಸ್ತೂರಿ ರಂಗನ್ ವರದಿ ವಿರುದ್ಧ ಜ.15 ಕ್ಕೆ ಸುಬ್ರಹ್ಮಣ್ಯದಲ್ಲಿ ಉಗ್ರ ಪ್ರತಿಭಟನೆ

Kadaba Times News

ಕಡಬ: ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಕ್ಕೂ, ಜನವಸತಿ ಪ್ರದೇಶಕ್ಕೂ, ಕೃಷಿ ಭೂಮಿಗೂ ಗಡಿ ಗುರುತು ಮತ್ತು ಅರಣ್ಯ ಇಲಾಖೆ, ಕಂದಾಯ ಇಲಾಖೆ ಜಂಟಿ ಸರ್ವೆ ಮಾಡುವಂತೆ ಅಗ್ರಹಿಸಿ ಕಸ್ತೂರಿ ರಂಗನ್ ವರದಿ ವಿರುದ್ಧ ಉಗ್ರ ಪ್ರತಿಭಟನೆಯನ್ನು ಸುಬ್ರಹ್ಮಣ್ಯದಲ್ಲಿ ಜನವರಿ 15 ರಂದು ನಡೆಸಲಾಗುವುದು ಎಂದು  ಮಲೆನಾಡು ಜನಹಿತ ರಕ್ಷಾಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು.

ಪತ್ರಿಕಗೋಷ್ಠಿಯಲ್ಲಿ ಮಾತನಾಡುತ್ತಿರುವ ಕಿಶೋರ್ ಶಿರಾಡಿ(KADABA TIMES)


ಅವರು  ಕಡಬದಲ್ಲಿ ಪತ್ರಿಕಗೋಷ್ಠಿಯಲ್ಲಿ ಮಾತನಾಡಿ ಜನವರಿ 8 ರಂದು ಪಂಜ ಅರಣ್ಯ ಕಛೇರಿ ಎದುರು  ಪ್ರತಿಭಟನೆ ನಡೆಸಿದ ಬಳಿಕ 15  ರಂದು ಸಬ್ರಹ್ಮಣ್ಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.  ನಮಗೆ ಈ ವರೆಗೆ ಭರವಸೆ ಮಾತ್ರ ದೊರೆತಿದೆ,   ವರದಿಯನ್ನು ಕೈಬಿಡುವ ಬಗೆಗಿನ ಲಿಖಿತ ಆದೇಶ ಕೈಸೇರುವ  ತನಕ ಹೋರಾಟ ನಡೆಯುತ್ತಲೇ ಇರುತ್ತದೆ ಎಂದರು.


ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಯ ಬಗೆಗಿನ ದಿಟ್ಟ  ನಿರ್ಧಾರ ಪ್ರಕಟಿಸಬೇಕು,   ಜಂಟಿ ಸರ್ವೆಯನ್ನು ಶೀಘ್ರ ಮುಗಿಸಿ ಕೇಂದ್ರಕ್ಕೆ ವರದಿ ಸಲ್ಲಿಸಬೇಕು,  ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ಕೈಬಿಡಬೇಕು.  ಆನೆ ದಾಳಿ, ಇತರೆ ಕಾಡು ಪ್ರಾಣಿಗಳಿಂದ ಕೃಷಿ ನಾಶವಾಗದಂತೆ ಆರಣ್ಯ ಇಲಾಖೆ ನಿಗಾ ವಹಿಸಬೇಕು.  ಪ್ಲಾಟಿಂಗ್ ಆಗದ ಹಕ್ಕುಪತ್ರಗಳಿಗೆ ಅಥವಾ ಸರ್ವೆ ನಂಬ್ರಗಳಿಗೆ ತಕ್ಷಣ ಪ್ಲೋಟಿಂಗ್ ಆಗುವ ರೀತಿಯಲ್ಲಿ ಅನುಮತಿ ನೀಡಬೇಕು. ರೈತರ ಸ್ವಾಧೀನ ಇರುವ ಕೃಷಿ ಭೂಮಿಗೆ ಹಕ್ಕುಪತ್ರ ನೀಡಲು ಅನುಮತಿ ನೀಡಬೇಕು, ಪರಿಭಾವಿತ ಅರಣ್ಯದಡಿಯಲ್ಲಿ ಸೇರಿಸಿರುವ ಕಂದಾಯ ಸರ್ವೆ ನಂಬ್ರಗಳನ್ನು ಪುನರ್ ಪರಿಶೀಲನೆ ಮಾಡಿ ಅದನ್ನು ಕಂದಾಯ ಭೂಮಿ ಎಂದು ಪರಿಗಣಿಸಬೇಕು. ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಕ್ಕೆ ಗಡಿಗುರುತು ಆಗಬೇಕು. ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೆ ನಡೆಯಬೇಕು. ರೈತರಿಗೆ ಕೋವಿ ಪರವಾನಿಗೆ ನೀಡಬೇಕು. ಪಶ್ಚಿಮ ಘಟ್ಟಕ್ಕೆ ಸಂಬoಧಪಟ್ಟoತೆ ಪರಿಸರ ಸಂರಕ್ಷಣೆಯ ತಜ್ಞರ ವರದಿ ತಯಾರಿಸುವಾಗ ಪಶ್ಚಿಮ ಘಟ್ಟ ಪ್ರದೇಶದ ಗ್ರಾಮ ಪಂಚಾಯತಿಗಳಲ್ಲಿ ವಿಶೇಷ ಗ್ರಾಮ ಸಭೆ ಕರೆದು ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಬೇಕು. ಮುಂತಾದ ಬೇಡಿಕೆಗಳನ್ನಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಕಿಶೋರ್ ಹೇಳಿದರು.


ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಯನ್ನು ಕೈಬಿಟ್ಟಿದೆ ಎಂದು ಹೇಳುತ್ತಲೇ ಬರುತ್ತಿವೆ. ಆದರೆ ರೈತರ ಆತಂಕವನ್ನು ದೂರ ಮಾಡುವ ಸ್ಪಷ್ಟ ನಿರ್ಧಾರ ಇನ್ನೂ ಪ್ರಕಟಿಸಿಲ್ಲ. ಬದಲಿಗೆ ರೈತರಿಗೆ ನೋಟೀಸ್ ನೀಡುವ ಕಾರ್ಯ  ಮುಂದುವರಿಯುತ್ತಲೇ ಇದೆ. ನಮ್ಮ ಪ್ರತಿಭಟನೆ ತಾಲೂಕು ಮಟ್ಟಕ್ಕೆ ನಿಲ್ಲುವುದಿಲ್ಲ. ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ಬಳಿಕ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. -ಸಯ್ಯದ್ ಮೀರಾ ಸಾಹೇಬ್ ,ಜಿಲ್ಲಾ ಪರಿಷತ್ ಮಾಜಿ ಸದಸ್ಯ 


ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಹರಿಪ್ರಸಾದ್ ಎನ್ಕಾಜೆ ಉಪಸ್ಥಿರಿದ್ದರು.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top