ಕೆಲಸ ಮುಗಿಸಿ ಸ್ಕೂಟಿಯಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ಕೆಲಸ ಮುಗಿಸಿ ಸ್ಕೂಟಿಯಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

Kadaba Times News
0

ಕಡಬ ಟೈಮ್ಸ್,ಸುಳ್ಯ:   ವ್ಯಕ್ತಿಯೊಬ್ಬರ ಮೇಲೆ  ಕಾಡಾನೆಯೊಂದು ದಾಳಿ ಮಾಡಿದ ಘಟನೆ ಸುಳ್ಯದ  ದೇವರ ಕೊಲ್ಲಿಯಲ್ಲಿಯ 10ನೇ ಮೈಲಿನಲ್ಲಿ ಜ.4 ರ ಶನಿವಾರ ನಡೆದಿದೆ.

ದೇವರಕೊಲ್ಲಿಯ ಸ್ಥಳೀಯ ನಿವಾಸಿ ಮುತ್ತು ಕಾಡಾನೆ ದಾಳಿಗೊಳಗಾದ ವ್ಯಕ್ತಿ  ಎಂದು ಗುರುತಿಸಲಾಗಿದೆ.



 ಎಸ್ಟೇಟ್ ನಲ್ಲಿ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಾಡಾನೆಯೊಂದು ದಿಡೀರ್ ದಾಳಿ ಮಾಡಿದೆ. ಅದೃಷ್ಟವಶಾತ್ ಓಡಿ ತಪ್ಪಿಸಿಕೊಂಡು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


ಘಟನೆಯಲ್ಲಿ ಸ್ಕೂಟಿ ಜಖಂಗೊಂಡಿದೆ.ಗಾಯಳುವನ್ನು ಮಡಿಕೇರಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top