




ಯುವಕರು ಸ್ನೇಹಿತನ ಬರ್ತ್ ಡೇ ಆಚರಿ ಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿ ದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರು ಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ.
ಕಡಬ ಟೈಮ್ಸ್ (KADABA TIMES) :ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಯುವಕರನ್ನುಪೊಲೀಸರು ವಶಕ್ಕೆ ಪಡಿದಿರುವುದಾಗಿ ತಿಳಿದು ಬಂದಿದೆ.
ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಬಣಕಲ್ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕರು ಸ್ನೇಹಿತನ ಬರ್ತ್ ಡೇ ಆಚರಿ ಸಲು ದೇವರಮನೆಗುಡ್ಡದ ನಿರ್ಜನ ಪ್ರದೇಶವನ್ನು ಆರಿಸಿಕೊಂಡಿ ದ್ದರು. ನಡುರಸ್ತೆಯಲ್ಲೇ ರಿಕ್ಷಾ, ಕಾರು ಗಳನ್ನು ನಿಲ್ಲಿಸಿದ್ದಲ್ಲದೆ ಮದ್ಯಪಾನವನ್ನೂ ಮಾಡಿದ್ದಾರೆ ಎನ್ನಲಾಗಿದೆ.
ಅಲ್ಲಿನ ರಸ್ತೆ ಕಿರಿದಾಗಿದ್ದು, ಪ್ರಪಾತದ ಸಮೀಪವಿದೆ. ಇಂತಹ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಬರ್ತ್ಡೇ ಆಚರಣೆಗೆ ಇಳಿದಿರುವುದು ಅಪಾಯವನ್ನು ಆಹ್ವಾನಿಸುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಯುವಕರನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿದು ಬಂದಿದೆ.