




ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ವೇಣೂರು ಪೊಲೀಸ್ ಠಾಣೆಯ ಪೊಲೀಸರು ಮೇ 24ರಂದು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದವರನ್ನು ವಶಕ್ಕೆ ಪಡೆದಿದ್ದಾರೆ.ಅಲ್ಲದೆ ಹಣ ಸಹಿತ5 ಕೋಳಿ ಹಾಗೂ ಎರಡು ಬಾಲುಕತ್ತಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ
ಕಡಬ ಟೈಮ್ಸ್, (KADABA TIMES): ದಕ್ಷಿಣ ಕನ್ನಡ: ಜಿಲ್ಲೆಯ ಹಲವೆಡೆ ನಿರಂತರ ಕೋಳಿ ಅಂಕ ನಡೆಯುತ್ತಿರುವ ಸುದ್ದಿಗಳು ಕೇಳಿ ಬರುತ್ತಿವೆ. ಈ ನಡುವೆ ಅಳದಂಗಡಿ ಬಳಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ವೇಣೂರು ಪೊಲೀಸ್ ಠಾಣೆಯ ಪೊಲೀಸರು ಮೇ 24ರಂದು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದವರನ್ನು ವಶಕ್ಕೆ ಪಡೆದ ಘಟನೆ ತಡವಾಗಿ ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಅಲೆಕ್ಕಿ ಎಂಬಲ್ಲಿ ಈ ಕೋಳಿ ಅಂಕ ನೆಡೆದಿದ್ದು ಘಟನೆಗೆ
ಸಂಬಂಧಿಸಿ ಪ್ರವೀಣ್ ಬಳಂಜ,
ರಮೇಶ್ ಅಲೆಕ್ಕಿ, ಜೋಯೆಲ್ ಕರಂಬಾರು, ರಾಜೇಶ್ ಪೂಜಾರಿ ಸುಲ್ಕೇರಿಮೊಗ್ರು, ಅವಿನಾಶ್ ಕುದ್ಯಾಡಿ, ತೇಜಸ್ ಗರ್ಡಾಡಿ, ಸುಂದರ ಮಾಳ, ಮೇಘರಾಜ್ ಗರ್ಡಾಡಿ, ಉಮೇಶ್ ಬಡಗಕಾರಂದೂರು ಅವರನ್ನು
ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ .
ಈ ವೇಳೆ ಕೆಲವರು ಪರಾರಿಯಾಗಿದ್ದು 17,500 ರೂ. ಹಾಗೂ 5 ಕೋಳಿ ಹಾಗೂ ಎರಡು ಬಾಲುಕತ್ತಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ . ಠಾಣಾ ಉಪನಿರೀಕ್ಷಕ ಆನಂದ ಎಂ. ಹಾಗೂ ಸಿಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಬೆಳ್ತಂಗಡಿ
ಎ.ಸಿ.ಜೆ.ಮತ್ತು
ಜೆ.ಎಂ.ಎಫ್.ಸಿ.
ನ್ಯಾಯಾಲಯಕ್ಕೆ ಕೋರಿಕೆ ಪತ್ರ ಸಲ್ಲಿಸಿ ನ್ಯಾಯಾಲಯದ ಅನುಮತಿ ಪಡೆದು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.