ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್. ಪಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್. ಪಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Kadaba Times News

ಕಡಬ ಟೈಮ್ಸ್ (KADABA TIMES): ಸರ್ಕಾರ ಹಾಗೂ ಪ್ರಧಾನ ಕಚೇರಿಯ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಹುದ್ದೆಯನ್ನು ಡಾ. ಅರುಣ್ ಕೆ. ಅವರು ಶುಕ್ರವಾರ ವಹಿಸಿಕೊಂಡಿದ್ದಾರೆ.‌ ನಿರ್ಗಮಿತ ಎಸ್.ಪಿ. ಯತೀಶ್ ಎನ್. ಅವರು ಅಧಿಕಾರ ಹಸ್ತಾಂತರ ಮಾಡಿದರು.



ವೇಳೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು.


ಅದೇ ರೀತಿ ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗೋಹತ್ಯೆ/ಸಾಗಾಟ, ಮಾದಕ ಪದಾರ್ಥಗಳ ಸಾಗಾಟ/ಮಾರಾಟ/ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.


ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮುಕ್ತವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿಗೆ ಸಂಖ್ಯೆ: 0824-2220503 ಗೆ ಮಾಹಿತಿ ನೀಡಬಹುದು‌‌‌ ಎಂದು‌‌ ಅವರು ತಿಳಿಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top