ಪಶ್ಚಿಮಘಟ್ಟದ ಕುಮಾರ ಪರ್ವತದ ತಪ್ಪಲಿನ ಪ್ರದೇಶದಲ್ಲಿ ಮುಂದುವರಿದ ಮಳೆ: ಎರಡು ದಿನ ರೆಡ್ ಅಲರ್ಟ್ ಘೋಷಣೆ

ಪಶ್ಚಿಮಘಟ್ಟದ ಕುಮಾರ ಪರ್ವತದ ತಪ್ಪಲಿನ ಪ್ರದೇಶದಲ್ಲಿ ಮುಂದುವರಿದ ಮಳೆ: ಎರಡು ದಿನ ರೆಡ್ ಅಲರ್ಟ್ ಘೋಷಣೆ

Kadaba Times News

ಕಡಬ ಟೈಮ್ಸ್, ಪ್ರಮುಖ ಸುದ್ದಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜಿಲ್ಲಾಡಳಿತಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲಿಯೇ ಜಿಲ್ಲೆಯಾದ್ಯಂತ ಭಾರೀ ಮಳೆ ಆರಂಭಗೊಂಡಿದೆ. ಮೇ 23 ರವರೆಗೂ ಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿತ್ತು.



ಭಾರೀ ಮಳೆ: ಕಡಬ ಸಹಿತ ಸುಬ್ರಹ್ಮಣ್ಯ, ಸುಳ್ಯ, ಪುತ್ತೂರು ಕಡೆಗಳಲ್ಲಿ ಸೋಮವಾರ ಬೆಳಗ್ಗಿನಿಂದಲೇ ನಿರಂತರ ಮಳೆ ಸುರಿಯುತ್ತಿದೆ.  ಮಂಗಳವಾರ ಬೆಳಗ್ಗಿನ ವೇಳೆಗೆ ಬಿರುಸು ಪಡೆದುಕೊಂಡಿದೆ. ಮೇ 21 ಹಾಗೂ 22 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಮಳೆಯ ಅಬ್ಬರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.


ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ನೀರು ನುಗ್ಗುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿಯೇ ಇದ್ದು ಸ್ಥಿತಿಗತಿಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ.  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿಗಳ ಸಮೀಪಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top