




ಕುಕ್ಕೆ ಸುಬ್ರಹ್ಮಣ್ಯ: ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಅರವಿಂದ ಅವರು ಮೇ.15 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕುಕ್ಕೆ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನ್ಯಾಯಮೂರ್ತಿಗಳನ್ನು ಶಾಲು ಹೊದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಸತೀಶ್ ಕೂಜುಗೋಡು, ಪವನ್, ಮತ್ತು ಪ್ರಮುಖ ಉದ್ಯಮಿ ಕಿಶೋರ್ ಆರಂಪಾಡಿ, ಉದ್ಯಮಿ ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.