




ಕಡಬ ಟೈಮ್,(KADABA TIMES): ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದಲ್ಲಿ (Bantwala) ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ.
![]() |
ಸಿಯಾಬುದ್ದೀನ್ ಸುಂಕದಕಟ್ಟೆ(KADABA TIMES) |
ದಕ್ಷಿಣ
ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಈ ನಡುವೆ ಕಡಬದಲ್ಲಿ
ಕಾಂಗ್ರೆಸ್ ನ ಯುವ ಮುಖಂಡರೊಬ್ಬರು
ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಸುದ್ದಿಯಾಗಿದ್ದಾರೆ.
ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿಯಾಬುದ್ದೀನ್ ಸುಂಕದಕಟ್ಟೆ ಅವರು ಬುಧವಾರ(ಮೇ28 ರಂದು) ತನ್ನ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಸರಕಾರದ ಆಡಳಿತ ವ್ಯವಸ್ಥೆಯಿಂದ ತಾನು ಬೇಸೆತ್ತಿದ್ದು, ಜನರಲ್ಲಿ ಕಾನೂನಿನ ಮೇಲಿನ ನಂಬಿಕೆ ಕಡಿಮೆಯಾಗಿದೆ. ಈ ಘಟನೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರವಾಗಿದೆ ಎಂದು ಅವರು ತಿಳಿಸಿದ್ದಾರೆ.