ಕಡಬದ ಯುವ ಕಾಂಗ್ರೆಸ್ ಮುಖಂಡ ತನ್ನ ಸ್ಥಾನಕ್ಕೆ ರಾಜೀನಾಮೆ ಘೋಷಣೆ: ಅಷ್ಟಕ್ಕೂ ಕಾರಣವೇನು?

ಕಡಬದ ಯುವ ಕಾಂಗ್ರೆಸ್ ಮುಖಂಡ ತನ್ನ ಸ್ಥಾನಕ್ಕೆ ರಾಜೀನಾಮೆ ಘೋಷಣೆ: ಅಷ್ಟಕ್ಕೂ ಕಾರಣವೇನು?

Kadaba Times News

ಕಡಬ ಟೈಮ್,(KADABA TIMES):  ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದಲ್ಲಿ (Bantwala) ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ.

ಸಿಯಾಬುದ್ದೀನ್ ಸುಂಕದಕಟ್ಟೆ(KADABA TIMES)


ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಈ ನಡುವೆ ಕಡಬದಲ್ಲಿ ಕಾಂಗ್ರೆಸ್ ನ ಯುವ ಮುಖಂಡರೊಬ್ಬರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಸುದ್ದಿಯಾಗಿದ್ದಾರೆ. 


ಕಡಬ ಬ್ಲಾಕ್ ಕಾಂಗ್ರೆಸ್  ಉಪಾಧ್ಯಕ್ಷ  ಸಿಯಾಬುದ್ದೀನ್ ಸುಂಕದಕಟ್ಟೆ ಅವರು ಬುಧವಾರ(ಮೇ28 ರಂದು)  ತನ್ನ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಸರಕಾರದ ಆಡಳಿತ ವ್ಯವಸ್ಥೆಯಿಂದ ತಾನು ಬೇಸೆತ್ತಿದ್ದು, ಜನರಲ್ಲಿ ಕಾನೂನಿನ ಮೇಲಿನ ನಂಬಿಕೆ ಕಡಿಮೆಯಾಗಿದೆ. ಈ ಘಟನೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರವಾಗಿದೆ ಎಂದು ಅವರು  ತಿಳಿಸಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top