Mangaluru:ಮಂಗಳೂರಿನಲ್ಲಿ ರೌಡಿ ಶೀಟ‌ರ್ ಮೇಲೆ ತಲ್ವಾರ್ ದಾಳಿ-ಹತ್ಯೆ

Kadaba Times News

KADABA TIMES,( ಕಡಬ ಟೈಮ್ಸ್): ಮಂಗಳೂರಿನಲ್ಲಿ ಯುವಕನೋರ್ವನ ಮೇಲೆ ಯುವಕರ ಗುಂಪೊಂದು ತಲವಾರು ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ನಡೆದಿದೆ. 



ಕೊಲೆಯಾದವನನ್ನು ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ರೌಡಿ ಶೀಟ‌ರ್ ಸುಹಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. 


ಮಂಗಳೂರು ಹೊರವಲಯದ ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ರಸ್ತೆ ಮಧ್ಯೆ, ಸಾರ್ವಜನಿಕರೆದುರೇ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಸುಹಾಸ್‌ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವಿಗೀಡಾಗಿದ್ದಾರೆ. 


ಸುಹಾಸ್ ಶೆಟ್ಟಿ ಕೊಲೆಗೀಡಾದ ಸುದ್ದಿ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎಜೆ ಆಸ್ಪತ್ರೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಭರತ್ ಶೆಟ್ಟಿ ಸೇರಿದಂತೆ ಹಿಂದೂ ಕಾರ್ಯಕರ್ತರು ಬಿಜೆಪಿ ಮತ್ತು ಹಿಂದೂ ಸಂಘಟನೆ ನಾಯಕರು ಆಗಮಿಸಿದ್ದಾರೆ. 


ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top