Road Accident: ವಾರದ ಹಿಂದೆ ಕೊಯಿಲ ಬಳಿ ನಡೆದಿದ್ದ ಅಪಘಾತ ಪ್ರಕರಣ: ಆಸ್ಪತ್ರೆ ದಾಖಲಾಗಿದ್ದ ಹಳೆನೇರೆಂಕಿಯ ವ್ಯಕ್ತಿ ಮೃತ್ಯು

Road Accident: ವಾರದ ಹಿಂದೆ ಕೊಯಿಲ ಬಳಿ ನಡೆದಿದ್ದ ಅಪಘಾತ ಪ್ರಕರಣ: ಆಸ್ಪತ್ರೆ ದಾಖಲಾಗಿದ್ದ ಹಳೆನೇರೆಂಕಿಯ ವ್ಯಕ್ತಿ ಮೃತ್ಯು

Kadaba Times News

  ಆಲಂಕಾರು: ವಾರದ ಹಿಂದೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಟೆಂಪೋ ಟ್ರಾವೆಲರ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒರ್ವ  ಮೃತಪಟ್ಟ ಬಗ್ಗೆ ವರದಿಯಾಗಿದೆ.



ಕಡಬ ತಾಲೂಕು  ಹಳೆನೇರೆಂಕಿ ಗ್ರಾಮದ ಮಡೆಂಜಿಮಾರು ನಿವಾಸಿ ಪದ್ಮನಾಭ(48ವ.) ಅವರು ಮೇ 19ರಂದು ರಾತ್ರಿ ನಿಧನರಾದವರು.


ಮೇ.11ರಂದು ಸಂಜೆ ಪದ್ಮನಾಭ ಮತ್ತು ಇತರರು , ಕಾರಿನಲ್ಲಿ ಉಪ್ಪಿನಂಗಡಿ ಕಡೆಗೆ ಕಾರ್ಯಕ್ರಮವೊಂದಕ್ಕೆ ಹೋದವರು ಮತ್ತೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಮೂಲಕ ಮನೆಗೆ ಹಿಂತಿರುಗಿ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲ್ಲರ್  ನಡುವೆ ರಾತ್ರಿ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು.


ಘಟನೆಯಲ್ಲಿ ಕಾರಿನಲ್ಲಿದ್ದ ಪದ್ಮನಾಭ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಇವರಿಗೆ ಉಪ್ಪಿನಂಗಡಿಯ  ಖಾಸಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಅಲ್ಲಿ ಚಿಕಿತ್ಸೆಯಲ್ಲಿದ್ದ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೇ.19ರಂದು ರಾತ್ರಿ ನಿಧನರಾಗಿದ್ದಾರೆ.


ಕಾರಿನಲ್ಲಿದ್ದ ಸುದರ್ಶನ್, ಚೇತನ್, ಸತೀಶ್ ಅವರಿಗೂ ಗಾಯವಾಗಿದ್ದು ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಟೆಂಪೋ ಟ್ರಾವೆಲರ್‌ನಲ್ಲಿದ್ದವರು ಶಿವಮೊಗ್ಗ ಮೂಲದವರಾಗಿದ್ದು ಧರ್ಮಸ್ಥಳ-ಸುಬ್ರಹ್ಮಣ್ಯ ಕ್ಷೇತ್ರ ಸಂದರ್ಶಿಸಿ ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದರು. ಟೆಂಪೋ ಟ್ರಾವೆಲರ್‌ನಲ್ಲಿದ್ದವರಿಗೆ ಯಾವುದೇ ಗಾಯವಾಗಿರಲಿಲ್ಲ. ಘಟನೆ ಕುರಿತಂತೆ ಟೆಂಪೋ ಟ್ರಾವೆಲರ್ ಚಾಲಕ ಸುಜಯ್ ಎಂ.ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ಪದ್ಮನಾಭ ಅವರು ತಂದೆ ಅಣ್ಣುಗೌಡ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top