ಸುಬ್ರಹ್ಮಣ್ಯ: ಮುಜರಾಯಿ ಸಚಿವರನ್ನು ಭೇಟಿಯಾದ ದೇವಸ್ಥಾನದ ನೂತನ ಆಡಳಿತ ಮಂಡಳಿ ಅಧ್ಯಕ್ಷ

ಸುಬ್ರಹ್ಮಣ್ಯ: ಮುಜರಾಯಿ ಸಚಿವರನ್ನು ಭೇಟಿಯಾದ ದೇವಸ್ಥಾನದ ನೂತನ ಆಡಳಿತ ಮಂಡಳಿ ಅಧ್ಯಕ್ಷ

Kadaba Times News

ಕಡಬ ಟೈಮ್, ಕುಕ್ಕೆ ಸುಬ್ರಹ್ಮಣ್ಯ: ಇಲ್ಲಿನ   ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧೀನದಲ್ಲಿ ನಡೆಯುತ್ತಿರುವ ಎಸ್.ಎಸ್ ಪಿ.ಯು  ಕಾಲೇಜಿಗೆ ಪ್ರವೇಶ ಬಯಸಿ ನೂರಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೂ ಪ್ರವೇಶ ಸಿಗದೆ ನಿರಾಸೆಯಾದ ಘಟನೆ ವರದಿಯಾಗಿದೆ.

ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಭೇಟಿ ಮಾಡಿದ ಸಂದರ್ಭ(KADABA TIMES)


ಈ ಸಮಸ್ಯೆ ಬಗೆ ಹರಿಸಲು ಮುಜರಾಯಿ ಸಚಿವರಿಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಹರೀಶ್ ಇಂಜಾಡಿ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಮೇ.19 ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಕಾಲೇಜಿಗೆ ಹೆಚ್ಚುವರಿ ವಿಭಾಗ ತೆರೆಯಲು ಮನವಿ ಮಾಡಿದ್ದಾರೆ.


ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಪ್ರಸಕ್ತ ವರ್ಷ ಕಾಮರ್ಸ್ , ಸೈನ್ಸ್, ಕಂಪ್ಯೂಟರ್ ಸೈನ್ಸ್ ವಿಭಾಗ ಒಟ್ಟು ಸೇರಿ 474 ವಿದ್ಯಾರ್ಥಿಗಳು ಪ್ರವೇಶಾಕಾತಿ ಬಯಸಿ ಅರ್ಜಿ ಸಲ್ಲಿಸಿದ್ದರೆ ಅದರಲ್ಲಿ ಕೇವಲ 240 ವಿದ್ಯಾರ್ಥಿಗಳಿಗೆ ಪ್ರವೇಶವಕಾಶ ದೊರೆತಿದೆ. 234 ವಿದ್ಯಾರ್ಥಿಗಳು ಪ್ರವೇಶ ವಂಚಿತರಾಗಿರುವುದಾಗಿ ತಿಳಿದು ಬಂದಿದೆ. ಇದನ್ನು ಪರಿಹರಿಸಲು ಮುಜರಾಯಿ ಸಚಿವರಿಗೆ ಮನವಿ ನೀಡಲಾಗಿದ್ದು ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಿರುವುದಾಗಿ ತಿಳಿದು ಬಂದಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸಭೆ ನಡೆಸಿ ಅಲ್ಲಿ ನಿರ್ಣಯ ಕೈಗೊಂಡು ಬಳಿಕವಷ್ಟೆ ಸರ್ಕಾರಕ್ಕೆ ಪತ್ರ ಬರೆದು ಕಾರ್ಯಗತ ವಾಗಬೇಕಾಗಿದೆ. ಕಲಾ ವಿಭಾಗದಲ್ಲಿ 160 ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯಲು ಅವಕಾಶವಿದ್ದು ಅದು ಬಹುತೇಕ ಭರ್ತಿಯಾಗಿದೆ. 

ಮುಜುರಾಯಿ ಸಚಿವರ ಭೇಟಿ ಸಂದರ್ಭ ಗೂರೂಜಿ ನಾಗ ಭೂಷಣ್, ನ್ಯಾಯವಾದಿ ವೆಂಕಪ್ಪ ಗೌಡ ಸುಳ್ಯ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಪವನ್ ಎಂ.ಡಿ, ಭವಿಷ್ ಮತ್ತಿತರರು ಉಪಸ್ಥಿತರಿದ್ದರು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top