




ಕಡಬ ಟೈಮ್ಸ್,(KADABA TIMES) ಆಲಂಕಾರು: ಆಲಂಕಾರು ಗ್ರಾ.ಪಂ ಸಭಾಭವನದಲ್ಲಿ ಆಲಂಕಾರು, ಪೆರಾಬೆ ಗ್ರಾ.ಪಂ ವ್ಯಾಪ್ತಿಯ ಪಂಚ ಗ್ಯಾರಂಟಿ ಅನುಷ್ಠಾನದ ಸಭೆ ನಡೆದಿದೆ.
ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಮಾತನಾಡಿ, ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಗೃಹಲಕ್ಷ್ಮೀ ,ಗೃಹ ಜ್ಯೋತಿ ,ಶಕ್ತಿಯೋಜನೆ,ಅನ್ನಭಾಗ್ಯ,ಯುವನಿಧಿ ಯೋಜನೆಗಳನ್ನು ಸಮರ್ಪಕವಾಗಿ ತಾಲ್ಲೂಕಿನಲ್ಲಿ ವಿವಿಧ ಗ್ರಾ.ಪಂ ನ ಸಹಕಾರದೊಂದಿಗೆ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದ ಸಭೆಯನ್ನು ಆಯೋಜಿಸಿರುವುದಾಗಿ ತಿಳಿಸಿದರು. ಪಂಚ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸಹಕರಿಸಿದ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕಡಬ ತಾಲೂಕಿಗೆ ಗ್ಯಾರಂಟಿ ಯೋಜನೆಯಲ್ಲಿ ಒಟ್ಟು 184,74,37,365 ಹಣ ಬಂದಿದೆ. ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸುತ್ತಿದ್ದು, ಜನರು ಇದರ ಪ್ರಯೋಜನವನ್ನು ಪಡೆದು ಆರ್ಥಿಕ ಸದೃಡರಾಗಬೇಕು , ಗ್ಯಾರಂಟಿ ಯೋಜನೆಯಲ್ಲಿ ವಂಚಿತ ಫಲಾನುಭವಿಗಳ ಪಟ್ಟಿಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿಗಳ ಮೂಲಕ ಪಟ್ಟಿ ಮಾಡಿ ಕೇಂದ್ರ ಮತ್ತು ರಾಜ್ಯ ಸರಕಾರದ ಗಮನ ಸೆಳೆಯವುದು:-ಸುದೀರ್ ಕುಮಾರ್ ಶೆಟ್ಟಿ, ಅಧ್ಯಕ್ಷರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ
ಕಡಬ ತಾ.ಪಂ ಮುಖ್ಯ
ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿ, ಗ್ಯಾರಂಟಿ ಯೋಜನೆಯಿಂದ ಜನರ ಆರ್ಥಿಕ ಮಟ್ಟ ಸುಧಾರಣೆಯಾಗಿದ್ದು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರಲ್ಲದೆ ಡಿ.ಬಿ.ಟಿಯ
ಮೂಲಕ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿರುವುದು ಬಹಳ ಸಂತೋಷದ ವಿಚಾರವಾಗಿದ್ದು ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳುವಂತೆ ವಿನಂತಿಸಿದರು.
ಮೆಸ್ಕಾಂ ಇಲಾಖೆಯಿಂದ ಕೃಷ್ಣಮೂರ್ತಿ,ಉದ್ಯೋಗ ವಿನಿಮಯ ಕಛೇರಿಯ ಮಂಜೂಷಾ, ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಸದಸ್ಯರುಗಳು, ಆಲಂಕಾರು ಗ್ರಾ.ಪಂ ಅಧ್ಯಕ್ಷೆ ಸುಶೀಲಾ, ಪೆರಾಬೆ ಗ್ರಾ.ಪಂ ಅಧ್ಯಕ್ಷೆ ಸಂಧ್ಯಾ ಉಪಸ್ಥಿತರಿದ್ದರು. ಆಲಂಕಾರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಜಾತ.ಕೆ , ಪೆರಾಬೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶಾಲಿನಿ ಆಲಂಕಾರು ಗ್ರಾ.ಪಂ ಕಾರ್ಯದರ್ಶಿ ವಸಂತ ಶೆಟ್ಟಿ, ಆಲಂಕಾರು, ಪೆರಾಬೆ ಗ್ರಾ.ಪಂ ಸಿಬ್ಬಂದಿ ಗಳು ಸಹಕರಿಸಿದರು.