




ಕಡಬ ಟೈಮ್ಸ್, ಪ್ರಮುಖ ಸುದ್ದಿ: ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂ.16ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಇನ್ನು ಕಡಬ, ಸುಳ್ಯ,ಬೆಳ್ತಂಗಡಿ,ಪುತ್ತೂರು ತಾಲೂಕಿಗೆ ರಜೆ ಘೋಷಣೆ ಮಾಡಿಲ್ಲ.