




KADABA TIMES(ಕಡಬ ಟೈಮ್ಸ್) : ರಸ್ತೆಗೆ ಅಡ್ಡಲಾಗಿ ಸಣ್ಣ ಇಟ್ಟಿಗೆ ಇಟ್ಟು ಅದಕ್ಕೆ ಗೋಣಿಚೀಲ ಹಾಕಿ ಯಾವುದೇ ಸೂಚನಾ ಫಲಕ ಇಡದೆ ರಸ್ತೆ ಮುಚ್ಚಿದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿದ್ದು ಈ ಬಗ್ಗೆಪ್ರಕರಣ ದಾಖಲಾಗಿದೆ.
ಶಿಬಾಜೆಯ ಅಭಿಲಾಷ್ ಗಾಯಗೊಂಡ ಆಟೋ ಚಾಲಕ . ಶಿಬಾಜೆ ಕಡೆಯಿಂದ ಅರಸಿನಮಕ್ಕಿ ಕಡೆಗೆ ರಾತ್ರಿ ಚಲಾಯಿಸಿಕೊಂಡು ಹೋಗುತ್ತಿರುವ ಸಮಯದಲ್ಲಿ ಕುರುಂಬು ಎಂಬಲ್ಲಿಗೆ ತಲುಪುತ್ತಿದಂತೆ ರಸ್ತೆಯ ಮಧ್ಯಭಾಗದಲ್ಲಿ ಸಣ್ಣ ಇಟ್ಟಿಗೆ ಇಟ್ಟು ಅದರ ಮೇಲೆ ಗೋಣಿಚೀಲ ಹಾಕಿ ಯಾವುದೇ ಸೂಚನಾ ಫಲಕ ಇಡದೇ ರಸ್ತೆಯನ್ನು ಮುಚ್ಚಿದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿತ್ತು.
ಕೂಡಲೇ ಆಟೋಚ್ ಚಾಲಕ ಅವರ ತಮ್ಮನಿಗೆ ದೂರವಾಣಿ ಕರೆ ಮೂಲಕ ಅಪಘಾತವಾದ ಬಗ್ಗೆ ತಿಳಿಸಿ ಅಪಘಾತ ಸ್ಥಳಕ್ಕೆ ಬಂದು ಉಪಚರಿಸಿ ಕುಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಕರಣ ಸಂಬಂಧ ಕುರುಂಬು ನಿವಾಸಿ ಧರ್ಣಪ್ಪ ಗೌಡ ವಿರುದ್ದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಾಲಕ ನೀಡಿದ ದೂರಿನ ಮೇರೆಗೆ BNS) 2023(u/s -285,125(a)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.