Heart attack -ಸುಬ್ರಹ್ಮಣ್ಯದ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ವ್ಯಕ್ತಿ ಹೃದಯಾಘಾತದಿಂದ ಮೃತ್ಯು

Heart attack -ಸುಬ್ರಹ್ಮಣ್ಯದ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ವ್ಯಕ್ತಿ ಹೃದಯಾಘಾತದಿಂದ ಮೃತ್ಯು

Kadaba Times News

 ಕಡಬ ಟೈಮ್ಸ್ (KADABA TIMES) :ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕೆ.ಎಸ್. ಆರ್. ಟಿ.ಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ  ಜೂ.28 ರಂದು ವರದಿಯಾಗಿದೆ.



ಕಡಬ ತಾಲೂಕು  ಐನೆಕಿದು ಗ್ರಾಮದ ಕುಜುಂಬಾರು ನಿವಾಸಿ ಡೀಕಯ್ಯ ಉಪ್ಪಳಿಕೆ (55ವ ) ಮೃತಪಟ್ಟವರು.

ಅನಾರೋಗ್ಯವಿದ್ದ ಕಾರಣ  ಔಷಧಿ ಮಾಡಿಕೊಂಡಿದ್ದರು. ಜೂ.28ರಂದು ಕಡಬಕ್ಕೆ ಹೋಗುವ ಸಲುವಾಗಿ ಬಸ್  ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಾ ಚೇರ್‌ ನಲ್ಲಿ ಕುಳಿತುಕೊಂಡಿದ್ದರು. ಈ ವೇಳೆ  ಅಸ್ವಸ್ಥ ಗೊಂಡು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ  ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತಾದರೂ ಅದಾಗಲೇ ಅವರು ಮೃತ ಪಟ್ಟಿದ್ದರೆನ್ನಲಾಗಿದೆ. .


ಮೃತರು ಪತ್ನಿ ವೇದಾವತಿ, ತಾಯಿ ಶಿವಮ್ಮ, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.ಮೃತರ ಪತ್ನಿ ನೀಡಿದ ದೂರಿನಂತೆ  ಸುಬ್ರಹ್ಮಣ್ಯ ಪೊಲೀಸ್‌ ಠಾಣೆ ಯುಡಿಆರ್ ನಂಬ್ರ: 20/2025 ಕಲಂ:  ‌ 194 BNSS ಯಂತೆ ಪ್ರಕರಣ ದಾಖಲಾಗಿರುತ್ತದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top