




ಕಡಬ ಟೈಮ್ಸ್, ಪ್ರಮುಖ ಸುದ್ದಿ : ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿಶ್ವವಿದ್ಯಾಲಯದಲ್ಲಿ ಜೂನ್ 22ರಿಂದ 28ರವರೆಗೆ ನಡೆಯಲಿರುವ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ನ ಪ್ರಮುಖ ಸಮ್ಮೇಳನದಲ್ಲಿ ಡಾ. ಮೀರಾಮಣಿಯವರು ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ.
![]() |
ಡಾ. ಮೀರಾಮಣಿ( KADABA TIMES) |
ಅವರು “ಸೇಕ್ರೆಡ್ ನರೇಟಿವ್ಸ್ ಆಂಡ್ ರಿಚುವಲ್ ಎಕ್ಸ್ಪ್ರೆಷನ್ಸ್: ಎಕ್ಸ್ಪ್ಲೋರಿಂಗ್ ಸೌತ್ ಏಷಿಯಾಸ್ ಫೋಕ್ ಟ್ರೆಡಿಷನ್ಸ್ ಆಂಡ್ ಕಲ್ಚರಲ್ ಕಂಟಿನ್ಯೂಟಿ” ವಿಷಯದ ಸಂಯೋಜಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಸಮ್ಮೇಳನದಲ್ಲಿ ಅವರು ಎರಡು ಮಹತ್ವದ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಿದ್ದಾರೆ.
ಮೊದಲನೆಯದಾಗಿ, “ಡಿಜಿಟಲ್ ಪ್ರಿಸರ್ವೇಶನ್ ಆಂಡ್ ಕಲ್ಚರಲ್ ಹೆರಿಟೇಜ್ ಇನ್ ಇಂಡಿಯಾ: ವಿತ್ ಸ್ಪೆಷಲ್ ರೆಫರೆನ್ಸ್ ಟು ಇನ್ಸ್ಟಿಟ್ಯೂಷನಲ್ ರೆಪೊಸಿಟರೀಸ್ ಇನ್ ಕರ್ನಾಟಕ ಸ್ಟೇಟ್” ಎಂಬ ವಿಷಯದ ಕುರಿತಂತೆ ಹಾಗೂ ಎರಡನೆಯದಾಗಿ, “ಫೋಕ್ ಕಲ್ಚರ್ ಇನ್ ಇಂಡಿಯಾ: ರಿಚುವಲ್ ಆಂಡ್ ಸ್ಪಿರಿಚುಯಲ್ ಪ್ರಾಕ್ಟೀಸಸ್ ಇನ್ ತುಳುನಾಡು” ಎಂಬ ಪ್ರಬಂಧವನ್ನು ಮಂಡಿಸಲಿದ್ದಾರೆ.
ಈ ಸಮ್ಮೇಳನದಲ್ಲಿ ಸುಮಾರು 70 ದೇಶಗಳ ಸಂಶೋಧಕರು ಭಾಗವಹಿಸುವ ನಿರೀಕ್ಷೆಯಿದೆ.ಡಾ. ಮೀರಾಮಣಿ ಅವರು ಕಡಬ ತಾಲೂಕಿನ ಕುದ್ಮಾರು ಗ್ರಾಮದ ನೂಜಿ ದಿ. ಲಿಂಗಪ್ಪ ಗೌಡ ಮತ್ತು ದುಗ್ಗಮ್ಮ ದಂಪತಿಗಳ ಪುತ್ರಿ, ಎಡಮಂಗಲ ಗ್ರಾಮದ ಆನಂದ ಪರ್ಲ ಅವರ ಪತ್ನಿಯಾಗಿದ್ದಾರೆ.
ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಇವರು ಜೈನ್ ಯುನಿರ್ಸಿಟಿಯಲ್ಲಿ ಗ್ರಂಥಪಾಲಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಕುದ್ಮಾರು ಸರ್ಕಾರಿ ಶಾಲೆಯಲ್ಲಿ,ಹೈಸ್ಕೂಲ್ ಶಿಕ್ಷಣವನ್ನು ಎಡಮಂಗಲದಲ್ಲಿ, ಪದವಿಪೂರ್ವ ಶಿಕ್ಷಣವನ್ನು ಕಾಣಿಯೂರು ಕಾಲೇಜಿನಲ್ಲಿ ಪೂರೈಸಿದ್ದಾರೆ.