ಆಲಂಕಾರಿನ ಕಕ್ವೆ‌ ಯಲ್ಲಿ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತಗೊಂಡ ಸ್ಥಳಕ್ಕೆ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ

ಆಲಂಕಾರಿನ ಕಕ್ವೆ‌ ಯಲ್ಲಿ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತಗೊಂಡ ಸ್ಥಳಕ್ಕೆ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ

Kadaba Times News

 ಆಲಂಕಾರು: ಆಲಂಕಾರು ಗ್ರಾಮದ ಕಕ್ವೆ‌ ಎಂಬಲ್ಲಿ ಮೇ.30ರಂದು ಸುರಿದ ಧಾರಕಾರ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತಗೊಂಡಿದ್ದು, ಇದರ ಪಕ್ಕದ ಕೃಷಿ ಭೂಮಿಗಳಿಗೆ ಹಾನಿಯಾಗಿರುವ ಪ್ರದೇಶಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಜೂ.10 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸ್ಥಳದಿಂದಲೇ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲ ವರ್ಗೀಸ್ ರವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಶಾಸಕಿಯವರು  ಘಟನೆಯ ಬಗ್ಗೆ ವಿವರಿಸಿ ಸಂಬಂಧಪಟ್ಟ ಇಂಜಿನಿಯರ್ ಸಮೇತ ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿ ಎಸ್ಟೀಮೇಟ್ ತಯಾರಿಸಿ ವರದಿ ನೀಡುವಂತೆ ತಿಳಿಸಿದರು. ರಸ್ತೆ ಕುಸಿದ ಭಾಗದ ಮುಂದುವರಿದ ಎರಡು ಕಡೆಗಳ ರಸ್ತೆ ಇಳಿಜಾರು ಪ್ರದೇಶವಾಗಿದ್ದು, ಮಳೆ ನೀರು ಈಗಾಗಲೇ ಕುಸಿದ ಜಾಗಕ್ಕೆ ಬಾರದ ರೀತಿಯಲ್ಲಿ ಇಕ್ಕೆಡೆಗಳಲ್ಲಿ ಸಮರ್ಪಕ ಚರಂಡಿ ನಿರ್ಮಾಣ ಮಾಡಲು ಗ್ರಾ.ಪಂ ಗೆ ಸೂಚಿಸಿದರು.


ನೀರು ಸಂಚರಿಸುವ ಜಾಗದಲ್ಲಿ ಸ್ಥಳೀಯರ ತಕರಾರು ಇದ್ದು ಗ್ರಾ.ಪಂ ವತಿಯಿಂದ ಚರಂಡಿ ನಿರ್ಮಿಸುವಾಗ ಸ್ಥಳಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಗೊಂದಲಕ್ಕೆ ಆಸ್ಪದ ನೀಡದಂತೆ ಕ್ರಮವಹಿಸಬೇಕೆಂದು ಗ್ರಾ.ಪಂಗೆ ಸಲಹೆ‌ ನೀಡಿದರು. ಸಹಾಯಕ ಆಯುಕ್ತರ ವರದಿಯ ಮೇಲೆ ಕ್ರಮಕೈಗೊಳ್ಳಲಾಗುವುದು ಸ್ಥಳೀಯರಿಗೆ ಭರವಸೆ ನೀಡಿದರು.


ಕಕ್ವೆಯ ಈ ರಸ್ತೆಯೇ 10 ಮನೆಗಳಿಗೆ ಸಂಪರ್ಕಕೊಂಡಿಯಾಗಿದೆ. ರಸ್ತೆ ಕುಸಿತದಿಂದ ಭಾಹ್ಯ ಸಂಪರ್ಕ ಕಳೆದುಕೊಂಡಿದ್ದೇವೆ. ಈ ಭಾಗದ ಹೈನುಗಾರರು, ಶಾಲಾ ವಿದ್ಯಾರ್ಥಿಗಳು ದಿನ ನಿತ್ಯ ತೆರಳಲು ಈ ರಸ್ತೆಯನ್ನು ಅವಲಂಬಿಸಿದ್ದೇವೆ. ಈ ಭಾಗದಲ್ಲಿ ಯುವಕನೋರ್ವ ಅನಾರೋಗ್ಯ ಪೀಡಿತನಾಗಿ ಮಲಗಿದ ಸ್ಥಿತಿಯಲ್ಲಿದ್ದಾನೆ, ಆರೋಗ್ಯ ತಪಾಸಣೆ ನಡೆಸಲು 15ದಿನಕೊಮ್ಮೆ ಆಸ್ಪತ್ರೆಗೆ ತೆರಳಬೇಕಾಗಿದೆ ರಸ್ತೆ ಕುಸಿತದಿಂದ ಸಂಕಷ್ಟ ಎದುರಾಗಿದೆ ಎಂದು ಶಾಸಕರಿಗೆ ಸ್ಥಳಿಯರು ತಿಳಿಸಿದರು.


ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಸ್ಥಳೀಯಾಡಳಿತದ ಆಡಳಿತ ಮಂಡಳಿಯ ಮುಖ್ಯಸ್ಥರು ,  ಸ್ಥಳೀಯರು  ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top