






ಕಡಬ ಟೈಮ್ಸ್, ಮಂಗಳೂರು: ಒಎಲ್ಎಕ್ಸ್ ಆ್ಯಪ್ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ಜನರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಉತ್ತರ ಕ ನ್ನಡ ಜಿಲ್ಲೆಯ ಬನವಾಸಿಯ ರವಿಚಂದ್ರ ಮಂಜುನಾಥ ರೇವಣಕರ (29)ಎಂದು ಗುರುತಿಸಲಾಗಿದೆ.
ಆರೋಪಿಯು ನಕಲಿ ಜಾಹೀರಾತುಗಳನ್ನು ಒಎಲ್ಎಕ್ಸ್ನಲ್ಲಿ ಹಾಕಿ, ಖರೀದಿದಾರರಿಂದ ಮೊದಲು ಹಣ ಪಡೆದು ನಂತರ ಸಂಪರ್ಕ ಕಡಿದು ವಂಚನೆ ಮಾಡುತ್ತಿದ್ದನು. ಈತ ವಿವಿಧ ಬ್ಯಾಂಕ್ ಗಳಲ್ಲಿ 21 ಖಾತೆಗಳನ್ನು ಹೊಂದಿದ್ದು 8 ಸಿಮ್ ಕಾರ್ಡ್ ಬಳಕೆ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ.ಅಲ್ಲದೆ 80 ಕ್ಕೂ ಅದೀಕ ವಂಚನೆ ದೂರುಗಳು ದಾಖಲಾಗಿರುವುದು ತಿಳಿದು ಬಂದಿದೆ.
ಪೊಲೀಸರ ತನಿಖೆಯಲ್ಲಿ ಈ ವಂಚನೆಯ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದ್ರಿ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆಸಿದ್ದಾರೆ.