ವೇಶ್ಯಾವಾಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ: ಉಜಿರೆಯಲ್ಲಿ ಓರ್ವ ಯುವತಿಯ ರಕ್ಷಣೆ, ಇಬ್ಬರ ಬಂಧನ

ವೇಶ್ಯಾವಾಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ: ಉಜಿರೆಯಲ್ಲಿ ಓರ್ವ ಯುವತಿಯ ರಕ್ಷಣೆ, ಇಬ್ಬರ ಬಂಧನ

Kadaba Times News

ಕಡಬ ಟೈಮ್ಸ್, ಪ್ರಮುಖ ಸುದ್ದಿ: ವೇಶ್ಯಾವಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್.ಐ  ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ‌.14 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. 



ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ.ಉಜಿರೆ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆಗೆ ಕರೆಸಿದ್ದ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿರುವುದಾಗಿ ತಿಳಿದು ಬಂದಿದೆ. 


ಲಾಡ್ಜ್ ನ ಮ್ಯಾನೇಜರ್ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ (49)  ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಯೋಗಿಶ್ ಆಚಾರ್ಯ (49) ಎಂಬವರನ್ನು  ಪೊಲೀಸರು ಬಂಧಿಸಿದ್ದಾರೆ. ಲಾಡ್ಜ್ ಮಾಲೀಕ ಉಜಿರೆಯ ರಮೇಶ್ ಶೆಟ್ಟಿ , ಮ್ಯಾನೇಜರ್ ಸತೀಶ್ ಪೂಜಾರಿ, ಸಿಬ್ಬಂದಿ ಯೋಗೀಶ್ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.


 ಪೊಲೀಸರು ಪ್ರತಿ ವಾರ ಲಾಡ್ಜ್ ಗಳಿಗೆ ತೆರಳಿ ಲಾಡ್ಜ್ ಲೆಡ್ಜರ್ ಪುಸ್ತಕಗಳನ್ನು ಪರಿಶೀಲನೆ ನಡೆಸುತ್ತಿದ್ದರು. ಹೊಸ ಎಸ್ಪಿ ಬಂದ ಬಳಿಕ ಇತ್ತೀಚೆಗೆ ಎಲ್ಲ ಲಾಡ್ಜ್ ಮಾಲೀಕರನ್ನು ಠಾಣೆಗೆ ಕರೆಸಿ ಸಿಸಿ ಕ್ಯಾಮರ ,ಲೆಡ್ಜರ್ ಪುಸ್ತಕ, ಲಾಡ್ಜ್ ಗೆ ಬರುವ ಗ್ರಾಹಕರ ಐಡಿ ಕಾರ್ಡ್ ಸರಿಯಾಗಿ ನೋಡಿಕೊಳ್ಳಲು ವಾರ್ನಿಂಗ್ ನೀಡಿದ್ದರು‌‌. ಆದ್ರೆ ಲಾಡ್ಜ್ ಮಾಲೀಕರು ಮಾತ್ರ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು ಎನ್ನಲಾಗಿದೆ.


ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್, ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top