




ಕಡಬ ಟೈಮ್( KADABA TIMES): ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಯೋಗಿ ಹೊನ್ನಪ್ಪ ದೇವರಗದ್ದೆ ನಾಪತ್ತೆ ಆಗಿರುವುದಾಗಿ ಠಾಣೆಯಲ್ಲಿ ದೂರು ದಾಖಲಾದ ಘಟನೆ ವರದಿಯಾಗಿದೆ.
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬ್ಯಲೆನ್ಸ್ ವಾಹನದ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಹೊನ್ಬಪ್ಪ ನಾಪತ್ತೆಯಾದವರು.
Ambulance Driver Missing from Subrahmanya PHC; SDRF Joins Search Operation
ಜುಲೈ .22 ರಂದು ಅಂಬ್ಯಲೆನ್ಸ್ ಚಾಲಕ ಕೆಲಸಕ್ಕೆ ಮನೆಯಿಂದ ಮುಂಜಾನೆ ಹೋಗಿದ್ದು ಮೊಬೈಲ್ ಬಿಟ್ಟು ಹೋದ ಕಾರಣ ಆಸ್ಪತ್ರೆಯ ಸಿಬ್ಬಂದಿಯವರಿಗೆ
ಫೋನ್ ಮಾಡಿ ಮನೆಯಲ್ಲಿಯೇ ಫೋನ್ ಬಿಟ್ಟು ಬಂದಿದ್ದು ಅವರಿಗೆ ತಿಳಿಸಿ ಎಂದು ಪತ್ನಿ ಹೇಳಿದ್ದರು.
ನಂತರ ಆಸ್ಪತ್ರೆಯ ಸಿಬ್ಬಂದಿಗಳು ರಜೆ ಹಾಕಿ ಆಸ್ಪತ್ರೆಯಿಂದ ಹೋಗಿರುವುದಾಗಿ ತಿಳಿಸಿದ್ದು ಮದ್ಯಾಹ್ನ ವಾದರೂ ಮನೆಗೆ ಬಾರದೇ ಇರುವುದರಿಂದ ಆಸ್ಪತ್ರೆಗೆ
ಪೋನ್ ಮಾಡಿ ವಿಚಾರಿಸಿದಾಗ ಆಸ್ಪತ್ರೆಯಲ್ಲಿಯೇ ಸ್ಕೂಟಿ ವಾಹನವನ್ನು ಬಿಟ್ಟು ಹೋಗಿರುವುದಾಗಿ ತಿಳಿಸಿದ್ದರು.
ಪತ್ನಿ ಗಾಬರಿಗೊಂಡು ವಿಷಯವನ್ನು ದೇವಸ್ಥಾನದಲ್ಲಿ ಕೆಲಸ ಮಾಡುವ ಎಲ್ಲರಿಗೂ ತಿಳಿಸಿದ್ದು,
ತನ್ನ
ಗಂಡ ಕಾಣೆಯಾದ ಬಗ್ಗೆ ಊರಿನ ಗ್ರಾಮಸ್ಥರಿಗೂ ತಿಳಿದು ಎಲ್ಲಾ ಕಡೆ ಹುಡುಕಾಟ ಮಾಡಿದರೂ ಪತ್ತೆಯಾಗಿರುವುದಿಲ್ಲ.
ನಂತರ ಸುಬ್ರಹ್ಮಣ್ಯ ಅಗ್ರಹಾರ ಸೋಮನಾಥೇಶ್ವರ ದೇವಸ್ಥಾನದ
ಸಿಸಿ ಕ್ಯಾಮರವನ್ನು ಪರಿಶೀಲಿಸಿದಾಗ ಕುಮಾರಧಾರ ನದಿ
ಕಡೆಗೆ ಹೋಗುತ್ತಿರುವುದು ಕಂಡು ಬಂದಿದ್ದು, ನಂತರ ನದಿ ದಡದಲ್ಲಿ ಮತ್ತು ಸುತ್ತಮುತ್ತ ಹುಡುಕಾಟ ಮಾಡಿದರೂ
ಪತ್ತೆಯಾಗಿರುವುದಿಲ್ಲ. ಆದುದರಿಂದ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ
ಪತ್ನಿಯ ದೂರಿನಲ್ಲಿ ತಿಳಿಸಿದ್ದಾರೆ.
ಇದೀಗ ಈ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯ ತೀವ್ರಗೊಳ್ಳಿದ್ದು, SDRF (State Disaster Response Force) ತಂಡ ಸ್ಥಳಕ್ಕೆ ಆಗಮಿಸಿ ಕುಮಾರಧಾರ ನದಿಗೆ ಬಿದ್ದಿರುವ ಶಂಕೆ ಹಿನ್ನೆಲೆಯಲ್ಲಿ ಶೋಧ ಕಾರ್ಯದಲ್ಲಿ ತೊಡಗಿದೆ. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಜೇಶ್ ಎನ್.ಎಸ್., ಸಮಾಜ ಸೇವಕ ಡಾ. ರವಿಕಕ್ಕೆಪದವು, ಹಾಗೂ 30 ರಿಂದ 40 ಯುವಕರ ತಂಡ ಸಹ ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.